ಶಿವಮೊಗ್ಗ: ಪಂಚ ರಾಜ್ಯಗಳ ಚುನಾವಣೆಯ ರಂಗಿನ ಮಧ್ಯದಲ್ಲಿಯೇ ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದ್ದು, ಇನ್ನು ನಾಲ್ಕು ದಿನಗಳಲ್ಲಿ ಉಪ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಆ ನಾಲ್ಕರಲ್ಲೂ ಬಿಜೆಪಿಯೇ ಗೆಲ್ಲಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಳಗಾವಿಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಅದರ ಜತೆ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಿಗೆ ಪಕ್ಷದ ಚುನಾವಣಾ ಉಸ್ತುವಾರಿಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಉಪ ಚುನಾವಣಾ ದಿನಾಂಕ ಘೋಷಣೆ ಆದ ನಂತರ ಅಭ್ಯರ್ಥಿಗಳ ಹೆಸರನ್ನೂ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಾರ್ಚ್ 8ರಂದು ಬಜೆಟ್ ನಡೆಯಲಿದೆ. ಬಜೆಟ್ ಮಂಡನೆಯಾದ ನಂತರ ಚುನಾವಣಾ ಪ್ರಚಾರವನ್ನು ಅವರು ಆರಂಭಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವ ಯಡಿಯೂರಪ್ಪನವರು ಸೋಮವಾರದಂದು ಡಿವಿಜನ್ ವೀರಶೈವ ಹಾಸ್ಟೆಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದ ನಂತರ ಕೋಟೆ ಸೀತಾರಾಮಾಂಜನೇಯ ದೇವಸ್ಥಾನ, ಕೋಟೆ ಮಾರಿಕಾಂಬಾ ದೇವಸ್ಥಾನ, ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಗಂಡ ಮನೆಯಲ್ಲಿ ಇಲ್ಲವೆಂದು ಪ್ರಿಯತಮನನ್ನು ಕರೆಸಿಕೊಂಡ ಹೆಂಡತಿ! ಅಮೇಲಾಗಿದ್ದು ಏನು ಗೊತ್ತಾ?