ಬೆಂಗಳೂರು: ಬೀದರ್ನ ಶಾಹೀನ್ ಶಾಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದನ್ನು ವಿರೋಧಿಸಿ, ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ರಿಜ್ವಾನ್ ಆರ್ಷಾದ್ ಮತ್ತು ಕೆ. ಸುರೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರನ್ನು ರೇಸ್ ವ್ಯೂ ಹೋಟೆಲ್ ಎದುರು ಪೊಲೀಸರು ತಡೆದು, ಅಲ್ಲಿ ಬ್ಯಾರಿಕೇಡ್ ಹಾಕಿದರು.
ಆದರೆ ದಿನೇಶ್ ಗುಂಡೂರಾವ್ ಮತ್ತು ರಿಜ್ವಾನ್ ಅರ್ಷಾದ್ ಬ್ಯಾರಿಕೇಡ್ ಮೇಲೆಯೇ ಹತ್ತಿನಿಂತರು. ನಿಯಂತ್ರಣ ಕಷ್ಟವಾಗುತ್ತಿದ್ದಂತೆ ಕಾಂಗ್ರೆಸ್ ಪ್ರಮುಖ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. (ದಿಗ್ವಿಜಯ ನ್ಯೂಸ್)
Bengaluru: Karnataka Congress leaders Dinesh Gundu Rao, Rizwan Arshad, & K Suresh detained by police after they tried to take out a protest march to the CM's office. Congress is protesting against Bidar sedition case, alleging misuse of police department by the state government. pic.twitter.com/O8eJk2mXYx
— ANI (@ANI) February 15, 2020