ಬೆಂಗಳೂರು: ರಾಜ್ಯದಲ್ಲಿ ಇಂದು 1,978 ಜನರಲ್ಲಿ ಕರೊನಾ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಇದುವರೆಗೆ ಕಾಣಿಸಿಕೊಂಡ ಒಟ್ಟಾರೆ ಪ್ರಕರಣಗಳ ಸಂಖ್ಯೆ 28,71,298ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 56 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 35,835ಕ್ಕೆ ಹೆಚ್ಚಳವಾಗಿದೆ.
ಇಂದು 2,326 ಸೋಂಕಿತರು ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 27,98,703 ಸೋಂಕಿತರು ಗುಣಮುಖವಾಗಿದ್ದು, 36,737 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.24ಕ್ಕೆ ಕುಸಿದಿದ್ದು, ಮರಣ ಪ್ರಮಾಣ ಶೇ. 2.83ರಷ್ಟಿದೆ.
ಇಂದಿನ 11/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @mla_sudhakar @drashwathcn @GovindKarjol @LaxmanSavadi @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi https://t.co/OAmwhPJBWS pic.twitter.com/fs9qVCdrom
— K'taka Health Dept (@DHFWKA) July 11, 2021
ಬೆಂಗಳೂರು ನಗರದಲ್ಲಿ 433, ಮೈಸೂರು 261, ದಕ್ಷಿಣ ಕನ್ನಡ 195, ಶಿವಮೊಗ್ಗ 124, ಬೆಳಗಾವಿ 112, ತುಮಕೂರಿನಲ್ಲಿ 100 ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆಯಲ್ಲಿ ಹೊಸದಾಗಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಬಳ್ಳಾರಿ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಕುಸಿದಿದೆ. 10 ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಶೂನ್ಯಕ್ಕಿಳಿದಿದೆ. 21 ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಒಂದಂಕಿಗೆ ಇಳಿದಿದೆ. (ಏಜೆನ್ಸೀಸ್)
ತಮ್ಮನ ಸ್ಕೂಟರ್ ರಗಳೆ ಕೇಳಲಾಗದೆ ಅಣ್ಣ ಮಾಡಿದ ಕೆಲಸಕ್ಕೆ ಪೂರ್ತಿ ದೇಶದ ಮೆಚ್ಚುಗೆ
ಬಾಲಿವುಡ್ ನಟಿ ತಾಪ್ಸಿ ಪನ್ನು ಬಾಯ್ಫ್ರೆಂಡ್ಗೆ ಇಂದು ಜನ್ಮದಿನದ ಸಂಭ್ರಮ; ಹೇಗಿತ್ತು ಬರ್ತ್ಡೇ?