More

    ಮತದಾನ ಮಾಡಿದ ರಕ್ಷಿತ್ ಶೆಟ್ಟಿ; ಪಕ್ಷದ ಮೇಲೆ ಒಲವಿದೆ, ಪ್ರಚಾರಕ್ಕೆ ಹೋಗಲ್ಲ ಎಂದ ಸಿಂಪಲ್ ಸ್ಟಾರ್

    ಉಡುಪಿ: ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

    ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಉತ್ತಮ ಆರಂಭ, 9 ಗಂಟೆಯವರೆಗೆ ಶೇ. 8 ರಷ್ಟು ಮತ ಚಲಾವಣೆ

    ಬಾಲ್ಯದಲ್ಲಿ ಉಡುಪಿ ನಗರ ಬೆಳೆಯಬೇಕು ಎಂದು ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಎಂದು ಅನಿಸುತ್ತಿದೆ. ನಾಯಕನಾದವ ಊರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.

    ಇದನ್ನೂ ಓದಿ: ವೋಟರ್ ಐಡಿ ಮರೆತು ಬಂದ ಪ್ರಮೋದಾ ದೇವಿ ಒಡೆಯರ್! ಮುಂದೇನಾಯ್ತು?

    ಹಳ್ಳಿ ಭಾಗದಲ್ಲಿ ಮತದಾನದ ಬಗ್ಗೆ ಜನಕ್ಕೆ ಕಾಳಜಿ ಹೆಚ್ಚು. ನಮ್ಮ ನಾಯಕ ಯಾರಾಗಬೇಕು ಎಂದು ಜನ ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುತ್ತಾರೆ. ನಗರ ಜೀವನ ಬೇರೆ ಆಗಿರುತ್ತದೆ. ಯಾವ ನಾಯಕರು ಅಧಿಕಾರಕ್ಕೆ ಬರುತ್ತಾರೆ ಎಂದು ನಾವು ನಿರೀಕ್ಷೆ ಮಾಡುತ್ತಿದ್ದೇವೆ. ಯುವಜನರು ಯಾರನ್ನು ಆಯ್ಕೆ ಮಾಡುತ್ತಾರೆ ಅವರು ನಮ್ಮ ದೇಶದ ಭವಿಷ್ಯ ಆಗಿರುತ್ತಾರೆ. ಚುನಾವಣಾ ಪ್ರಕ್ರಿಯೆಗೆ ಹೊಸ ಹೊಸ ಮುಖಗಳು ಬರಲೇಬೇಕು. ಹೊಸ ನಾಯಕರು ಬಂದಾಗ ಹೊಸ ಹೊಸ ನಿರೀಕ್ಷೆಗಳು ಇರುತ್ತವೆ ಎಂದು ರಕ್ಷಿತ್ ಶೆಟ್ಟಿ ಅಭಿಪ್ರಾಯಪಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts