ಚುನಾವಣಾ ಸೋಲಿನಿಂದ ಕಂಗೆಟ್ಟ ನಿಖಿಲ್ ಕುಮಾರಸ್ವಾಮಿ! ಸಾಂತ್ವನ ಹೇಳಿದ ಡಿಕೆಶಿ

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡಿ ಸಾಂತ್ವಾನ ಹೇಳಿದ್ದಾರೆ. ರಾಮನಗರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ದ ಸೋಲು ಅನುಭವಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿಗೆ ಡಿಕೆಶಿ ಸಾಂತ್ವಾನ ಹೇಳುವ ಮೂಲಕ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ … Continue reading ಚುನಾವಣಾ ಸೋಲಿನಿಂದ ಕಂಗೆಟ್ಟ ನಿಖಿಲ್ ಕುಮಾರಸ್ವಾಮಿ! ಸಾಂತ್ವನ ಹೇಳಿದ ಡಿಕೆಶಿ