ನವದೆಹಲಿ: ಕರ್ನಾಟಕದ ಮಾಜಿ ರಾಜ್ಯಪಾಲ, ಕಾಂಗ್ರೆಸ್ ಧುರೀಣ ಹಂಸರಾಜ್ ಭಾರದ್ವಾಜ್ ವಿಧಿ ವಶರಾಗಿದ್ದಾರೆ. ಕೇಂದ್ರ ಕಾನೂನು ಸಚಿವರಾಗಿದ್ದ ಅವರು ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
2009ರಿಂದ 2014ರ ವರೆಗೆ ಕರ್ನಾಟಕದ ರಾಜ್ಯಾಪಾಲರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ 4 ಮುಖ್ಯಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದ್ದರು. ಅಲ್ಲದೆ ಹೆಚ್ಚುವರಿಯಾಗಿ 2012ರಿಂದ 2013 ಮಾರ್ಚ್ವರಗೆ ಕೇರಳದ ರಾಜ್ಯಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಬಹುದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ದೆಹಲಿಯ ನಿಗಮ್ ಬೋದ್ ಘಾಟ್ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಾರದ್ವಾಜ್ ಅವರ ಕುಟುಂಬ ವರ್ಗ ತಿಳಿಸಿದೆ.
ಭಾರದ್ವಾಜ್ ಗಾಂಧಿ ಕುಟುಂಬಕ್ಕೆ ನಿಷ್ಠಾವಂತರಾಗಿದ್ದರು. 1982ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ತೆಲಂಗಾಣ ಮರ್ಯಾದೆ ಹತ್ಯೆಯ ಪ್ರಮುಖ ಆರೋಪಿ, ಅಮೃತಾ ರಾವ್ ತಂದೆ ಮಾರುತಿ ರಾವ್ ಶವವಾಗಿ ಪತ್ತೆ