ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು10 ತಾಸಿಗೆ ಹೆಚ್ಚಿಸುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದ್ದು, ಎಂದಿನಂತೆ 8 ತಾಸು ಮುಂದುವರಿಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಕೆಲಸದ ಅವಧಿಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವ ಕಾರಣ ಕಾರ್ಮಿಕರ ಸಂದೇಹ, ದುಗುಡ ದೂರವಾಗಿದೆ ಎಂದರು.
ಇದನ್ನೂ ಓದಿ: ಕಾರ್ವಿುಕರ ಕೆಲಸದ ಅವಧಿ ಹೆಚ್ಚಳ ಪ್ರಶ್ನಿಸಿ ಪಿಐಎಲ್
ಇದಕ್ಕೂ ಮುನ್ನ, ರಾಜ್ಯ ಹೈಕೋರ್ಟ್ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸುತ್ತ, ಕಾರ್ಮಿಕರ ಕೆಲಸ ಅವಧಿ ಹೆಚ್ಚಿಸಿದ್ದು ಸರಿಯಲ್ಲ. ಶುಕ್ರವಾರದೊಳಗೆ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸಬೇಕು ಎಂದು ಸೂಚಿಸಿತ್ತು.