ತೀವ್ರಗೊಂಡ ಕರೊನಾ: ಸತ್ತವರ ಅಂತ್ಯಕ್ರಿಯೆಗೆ ಹೆಚ್ಚಿನ ಜಾಗ ಗುರುತಿಸಲು ಸೂಚನೆ

ಬೆಂಗಳೂರು: ಕೋವಿಡ್‌ನಿಂದ ಮೃತರಾದವರ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸಲು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಹಿರಿಯ ಸಚಿವರು, ಅಧಿಕಾರಿಗಳ ಜತೆ ಶನಿವಾರ ನಡೆದ ಸಭೆಯಲ್ಲಿ, ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್ಗಳು ಹಾಗೂ ಇತರ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‌ಗಳ ಕೋಚ್‌ಗಳನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಿದರು. ಇದನ್ನೂ ಓದಿ … Continue reading ತೀವ್ರಗೊಂಡ ಕರೊನಾ: ಸತ್ತವರ ಅಂತ್ಯಕ್ರಿಯೆಗೆ ಹೆಚ್ಚಿನ ಜಾಗ ಗುರುತಿಸಲು ಸೂಚನೆ