More

    ಕರಾವಳಿಗೆ ಮುಂದಿನ ಬಾರಿ ಸಚಿವ ಸ್ಥಾನ

    ಮಂಗಳೂರು/ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲರಿಗೂ ಅಧಿಕಾರ ಸಿಗಬೇಕೆಂಬ ಇಚ್ಛೆ ಹೊಂದಿದ್ದಾರೆ. 6 ತಿಂಗಳ ಅನಂತರ ಮತ್ತೆ ಕೆಲವು ಶಾಸಕರಿಗೆ ಮಂತ್ರಿ ಸ್ಥಾನ ಸಿಗಬಹುದು. ಕರಾವಳಿಗೂ ಸಿಗಬಹುದು ಎಂದು ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
    ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಎಲ್ಲರಿಗೂ ಆಸೆ ಇರುತ್ತೆ. ನನಗೂ ಇದೆ, ಸಮಯ ಬಂದಾಗ ಪಕ್ಷ ಅವಕಾಶ ಕೊಡುವ ವಿಶ್ವಾಸವಿದೆ ಎಂದರು.
    ಬಿಜೆಪಿ ಸರ್ಕಾರ 5 ವರ್ಷ ಪೂರ್ಣಗೊಳಿಸುವುದಿಲ್ಲ ಎಂಬ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಚ್‌ಡಿಕೆ ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ, ಹಾಗಾಗಿ ಎಲ್ಲಿ ಸೀರಿಯಸ್ ಆಗಿ ಇರಬೇಕೋ ಅಲ್ಲಿ ಜೋಕ್ ಮಾಡ್ತಾರೆ, ಎಲ್ಲಿ ಜೋಕ್ ಮಾಡಬೇಕೋ ಅಲ್ಲಿ ಸೀರಿಯಸ್ ಆಗ್ತಾರೆ ಎಂದು ಲೇವಡಿ ಮಾಡಿದರು.
    ಮಗಳ ಮದುವೆ ಮಾರ್ಚ್ ಮೊದಲ ವಾರ ನಡೆಯುತ್ತಿರುವ ಕಾರಣ ಒತ್ತಡದಲ್ಲಿದ್ದೇನೆ, ಹಾಗಾಗಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಿಲ್ಲ, ಅದಕ್ಕಾಗಿ ಪಕ್ಷದ ಅನುಮತಿ ಪಡೆದೇ ಬಂದಿದ್ದೇನೆ ಎಂದರು. ದ.ಕ. ಹಾಗೂ ಉಡುಪಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು, ಉಡುಪಿಯ ಕೃಷ್ಣ ಮಠಕ್ಕೂ ಭೇಟಿ ನೀಡಿದರು.

    ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಗೆ ಈ ಬಾರಿ ಬಜೆಟ್‌ನಲ್ಲಿ ಅನುದಾನ ಲಭಿಸುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚೆ ಮಾಡಲಾಗಿದೆ. ಅವರು ಸಮ್ಮತಿ ಸೂಚಿಸಿದ್ದಾರೆ.
    – ಶ್ರೀರಾಮುಲು, ರಾಜ್ಯ ಆರೋಗ್ಯ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts