More

    ಡಿಸಿಎಂ ಡಿಕೆಶಿಗೆ ಬಿಗ್​ ಶಾಕ್​: ಸಿಬಿಐ ದಾಖಲಿಸಿ FIR​ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

    ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್​ಐಆರ್​ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್​ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರಿಗೆ ಬಿಗ್​ ಶಾಕ್​ ನೀಡಿದೆ. ಅಲ್ಲದೆ, ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.

    ಸಿಬಿಐ ದಾಖಲಿಸಿರುವ ಎಫ್​ಐಆರ್​ನ ಕಾನೂನುಬದ್ಧತೆಯನ್ನು ಪ್ರಶ್ನೆ ಮಾಡಿ ಡಿ.ಕೆ.ಶಿವಕುಮಾರ್​ ಅರ್ಜಿ ಸಲ್ಲಿಸಿದ್ದರು. ಇದರ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ. ನಟರಾಜನ್​, ಎಫ್​ಐಆರ್​ ರದ್ದು ಕೋರಿ ಅರ್ಜಿದಾರರು ನ್ಯಾಯಾಲಯ ಮೆಟ್ಟಿಲೇರುವಲ್ಲಿ ಸಾಕಷ್ಟು ವಿಳಂಬ ಮಾಡಿದ್ದು, ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಈಗಾಗಲೇ ತನಿಖೆಯು ಅಂತಿಮ ಹಂತದಲ್ಲಿದ್ದು, ಆರೋಪಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಸಾಕಷ್ಟು ಸಾಕ್ಷಿಗಳನ್ನು ಸಹ ಸಂಗ್ರಹಿಸಲಾಗಿದೆ. ಆರೋಪ ಪಟ್ಟಿ ಸಲ್ಲಿಸುವ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಆದರೆ, ತನಿಖಾಧಿಕಾರಿಗಳು ಸಲ್ಲಿಸುವ ಆರೋಪ ಪಟ್ಟಿಯನ್ನು ಪ್ರಶ್ನೆ ಮಾಡಲು ಮತ್ತು ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಕೋರ್ಟ್​ ಅಭಿಪ್ರಾಯ ಪಟ್ಟಿದೆ.

    ಇದನ್ನೂ ಓದಿ: ನಟಿ ಊರ್ವಶಿ ರೌಟೇಲಾಗೆ ಇಮೇಲ್ ಕಳುಹಿಸಿದ ಕಳ್ಳ…ಐಫೋನ್ ಹಿಂದಿರುಗಿಸುವುದಕ್ಕೆ ಪ್ರತಿಯಾಗಿ ಇಟ್ಟ ಬೇಡಿಕೆಯೇನು ಗೊತ್ತಾ?

    ಪ್ರಕರಣ ಹಿನ್ನೆಲೆ ಏನು?
    ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ನಡೆಸಿದ ತನಿಖೆಯ ಫಲಿತಾಂಶಗಳ ಆಧಾರದ ಮೇಲೆ ಸಿಬಿಐ ಡಿಕೆಶಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್​ಐಆರ್​ ದಾಖಲಿಸಿದೆ. 2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆಶಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ದಾಳಿ ನಡೆಸಿತು. ಇದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತು. ಇಡಿ ತನಿಖೆಯ ಬಳಿಕ ಸಿಬಿಐ ಮಧ್ಯಪ್ರವೇಶಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. 2019ರ ಸೆಪ್ಟೆಂಬರ್ 25ರಂದು ಅಂದಿನ ಸರ್ಕಾರ ತನಿಖೆಗೆ ಅನುಮತಿ ನೀಡಿತು. ಅಂತಿಮವಾಗಿ ಡಿಕೆಶಿ ವಿರುದ್ಧ 2020ರ ಅಕ್ಟೋಬರ್ 3ರಂದು ಎಫ್​ಐಆರ್​ ದಾಖಲಿಸಿತು.

    ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ 2022ರ ಜುಲೈನಲ್ಲಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆ ತೆರವಾದಂತಾಗಿದೆ. (ಏಜೆನ್ಸೀಸ್​)

    VIDEO | ನವರಾತ್ರಿ ಆಚರಣೆ ವೇಳೆ ಇದ್ದಕ್ಕಿದ್ದಂತೆ ನಿಂತ ಜೈಂಟ್ ವೀಲ್ಹ್​​​; ಸಿಲುಕಿಕೊಂಡ 50 ಮಂದಿ..ಮುಂದೇನಾಯ್ತು?

    ಯುಎಸ್​ ಕ್ಯಾಪಿಟಲ್​ಗೆ ಪ್ಯಾಲೆಸ್ತೀನ್​ ಬೆಂಬಲಿಗರ ಮುತ್ತಿಗೆ: ಕದನ ವಿರಾಮಕ್ಕೆ ಒತ್ತಾಯ, 300 ಮಂದಿ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts