ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಥಾವರಚಂದ್ ಗೆಹ್ಲೋತ್ ಅವರು, ಜುಲೈ 11 ರಂದು ಬೆಳಿಗ್ಗೆ 10.30 ಕ್ಕೆ ರಾಜಭವನದ ಗ್ಲಾಸ್ ಹೌಸ್ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಾರ್ತಾ ಇಲಾಖೆ ತಿಳಿಸಿದೆ.
2014ರಿಂದ ರಾಜ್ಯಪಾಲರಾಗಿದ್ದ ವಜುಭಾಯ್ ವಾಲಾ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಗೆಹ್ಲೋತ್ ಅವರನ್ನು ನೇಮಕ ಮಾಡಲಾಗಿದೆ. ಮಧ್ಯಪ್ರದೇಶದ ನಾಗ್ಡಾದ ಮೂಲದ ಗೆಹ್ಲೋತ್ ಅವರು, ಬಿಜೆಪಿಯ ಹಿರಿಯ ಸದಸ್ಯರಾಗಿದ್ದಾರೆ. ಇವರು ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದರು. ಮೂರು ಬಾರಿ ಮಧ್ಯಪ್ರದೇಶದ ಶಾಸಕರಾಗಿ, ನಾಲ್ಕುಬಾರಿ ಲೋಕಸಭಾ ಸದಸ್ಯರಾಗಿದ್ದ ಗೆಹ್ಲೋತ್ ಅವರು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಆಂಧ್ರದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದರು; ಒಬ್ಬ ವಿದೇಶಿ ಪ್ರಜೆ ಸೇರಿ 6 ಜನರ ಬಂಧನ
VIDEO | ಕ್ಯಾಪ್ಟನ್ ಕೂಲ್ ಧೋನಿ ಬರ್ತ್ಡೇಗೆ ಐಸಿಸಿ ವಿಶೇಷ ಕೊಡುಗೆ