More

    ಮತ್ತೊಂದು ಬಾಂಬ್ ಸಿಡಿಸಿದ ಹರಿಪ್ರಸಾದ್; ಮೂಲ ಕಾಂಗ್ರೆಸ್ಸಿಗರಿಂದ ಸಿಗುತ್ತಾ ಬೆಂಬಲ?

    ಬೆಂಗಳೂರು: ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಶುಕ್ರವಾರ ನಾನು ಹೇಳಿದ್ದು ನಿಜ ಒಪ್ಪಿಕೊಳ್ಳುತ್ತೇನೆ. ಒಂದು ಸಾರಿ ಹೇಳಿದ ಮಾತು ವಾಪಾಸ್ ತಗೆದುಕೊಳ್ಳುವುದಿಲ್ಲ. ಹೇಳಿದ ಮಾತಿಗೆ ಬದ್ದನಾಗಿರುತ್ತೇನೆ ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದರು.

    ನಾನು ಹೇಳದ ಮೇಲೆ ನನ್ನ ಮಾತಲ್ಲ. ನಾನು ಹೇಳಿದ ಮೇಲೆ‌ ನನ್ನ ಮಾತಿಗೆ ಬದ್ದನಾಗಿರುತ್ತೇನೆ. ನಿನ್ನೆ ಸಭೆಗೆ ಕರೆದಿದ್ದರು ಹೋಗಿದ್ದೆ ಅಷ್ಟೇ. ಅಲ್ಲಿ ಕ್ಯಾಮರಾಗಳು ಇರಲಿಲ್ಲ ಮಾತಾಡಿದ್ದೇನೆ. ಕ್ಯಾಮರಾಗಳು ಇದ್ದಿದ್ದರೆ ಮಾತಾಡುತ್ತಿರಲಿಲ್ಲ. ನಾವು ಹಿಂದುಳಿದವರು ಅಷ್ಟೆಲ್ಲಾ‌ ಗಮನಿಸಿಲ್ಲ‌, ಯಾರೋ ಹಾಕಿರುತ್ತಾರೆ. ಕಾದು ನೋಡಿ‌ ರಾಜಕಾರಣ ಏನೇನು ಆಗುತ್ತದೆ ಎಂದು ಹರಿಪ್ರಸಾದ್ ಮತ್ತೊಂದು ಬಾಂಬ್ ಸಿಡಿಸಿದರು.

    ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಬಿಕೆ ಹರಿಪ್ರಸಾದ್ 

    ಹರಿಪ್ರಸಾದ್ ಹೇಳಿಕೆ ಹಲವು ಸಂಚಲನಕ್ಕೆ ಕಾರಣವಾಗಲಿದ್ದು, ಮುಂದೆ ಕಾಂಗ್ರೆಸ್ ನಲ್ಲಿ ಮಹತ್ತರ ರಾಜಕೀಯ ಬದಲಾವಣೆ ಆಗುತ್ತಾ ಕಾದು ನೋಡಬೇಕಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ನಲ್ಲಿ ಮೂಲ ಮತ್ತು ವಲಸಿಗರ ವಾರ್ ಶುರುವಾಗಿದ್ದು, ಸಿದ್ದರಾಮಯ್ಯ ಬೆನ್ನಿಗೆ ಅವರ ಬಳಗ ನಿಂತಿರುವುದಂತೂ ಸುಳ್ಳಲ್ಲ. ಆದರೆ ಹರಿಪ್ರಸಾದ್ ಹೇಳಿಕೆಗೆ ಮೂಲ ಕಾಂಗ್ರೆಸ್ಸಿಗರಿಂದ ಬೆಂಬಲ ಸಿಗುತ್ತಾ ಕಾದು ನೋಡಬೇಕಿದೆ.

    ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಅಸಮಾಧಾನ ಹಿನ್ನಲೆ: ಸಚಿವ ಬಿ. ನಾಗೇಂದ್ರ ಹೇಳಿದ್ದಿಷ್ಟು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts