ನವದೆಹಲಿ: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಉದ್ಭವಿಸಿರುವ ಸಂಘರ್ಷ ಮುಂದುವರಿದಿದ್ದು, ಕರ್ನಾಟಕಕ್ಕೆ ಇನ್ನೊಮ್ಮೆ ಹಿನ್ನಡೆ ಆದಂತಾಗಿದೆ. ಅರ್ಥಾತ್, ತಮಿಳುನಾಡಿಗೆ ಇನ್ನೂ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) 89ನೇ ಸಭೆಯಲ್ಲಿ ಇಂಥದ್ದೊಂದು ಆದೇಶ ಹೊರಬಿದ್ದಿದೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಅಹವಾಲನ್ನು ಆಲಿಸಿದ ಬಳಿಕ ಸಮಿತಿ ಈ ಆದೇಶವನ್ನು ನೀಡಿದೆ.
ಇದನ್ನೂ ಓದಿ: ಈ ದೇವಸ್ಥಾನದಲ್ಲಿ ಮಹಿಳೆಯರಿಗಷ್ಟೇ ಗರ್ಭಗುಡಿಗೆ ಪ್ರವೇಶ, ಪೂಜಿಸಲು ಅವಕಾಶ: ಮುಟ್ಟಾಗಿದ್ದರೂ ಇಲ್ಲಿ ಮೈಲಿಗೆಯಲ್ಲ!
ಸಿಡಬ್ಲ್ಯುಆರ್ಸಿ ಹೊಸ ಆದೇಶದ ಪ್ರಕಾರ ಕರ್ನಾಟಕ ನ. 1ರಿಂದ 15ರ ವರೆಗೆ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸಬೇಕಾಗಿದೆ. ಬಿಳಿಗುಂಡ್ಲು ಮೂಲಕ ಈ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಜಲಾಶಯಗಳಿಗೆ ನೀರಿನ ಹರಿವು ಬಹುತೇಕ ಇಲ್ಲವಾಗಿರುವುದರಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ತರುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಕರ್ನಾಟಕ ಮನವಿ ಮಾಡಿಕೊಂಡಿದ್ದರೂ ಈ ಆದೇಶ ಹೊರಬಿದ್ದಿದೆ ಎನ್ನಲಾಗಿದೆ.
The Cauvery Water Regulation Committee (CWRC) recommends Karnataka to release 2600 cusecs of water per day to Tamil Nadu at Biligundlu from 1st November to 15th November pic.twitter.com/DsSR9zW3lM
— ANI (@ANI) October 30, 2023
ಸಾಫ್ಟ್ವೇರ್ ಉದ್ಯೋಗ: ಫ್ರೆಷರ್ಸ್ಗೆ ಭಾರತದಲ್ಲೇ ಕಡಿಮೆ ಸಂಬಳ, ಜಾಸ್ತಿ ಕೆಲಸ!
ಫ್ರೆಷರ್ಸ್ಗೆ ಹೋಲಿಸಿದ್ರೆ ಇನ್ಫೊಸಿಸ್ ಸಿಇಒ ಸಂಬಳ 2,200 ಪಟ್ಟು ಹೆಚ್ಚು!; ಅವರು ಎಷ್ಟು ಗಂಟೆ ಕೆಲಸ ಮಾಡ್ತಾರೆ?