More

    ಕಾವೇರಿ ನದಿ ನೀರು ವಿವಾದ: ಇನ್ನೂ 15 ದಿನ ನಿತ್ಯ 2,600 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಆದೇಶ!

    ನವದೆಹಲಿ: ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಉದ್ಭವಿಸಿರುವ ಸಂಘರ್ಷ ಮುಂದುವರಿದಿದ್ದು, ಕರ್ನಾಟಕಕ್ಕೆ ಇನ್ನೊಮ್ಮೆ ಹಿನ್ನಡೆ ಆದಂತಾಗಿದೆ. ಅರ್ಥಾತ್, ತಮಿಳುನಾಡಿಗೆ ಇನ್ನೂ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.

    ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್​ಸಿ) 89ನೇ ಸಭೆಯಲ್ಲಿ ಇಂಥದ್ದೊಂದು ಆದೇಶ ಹೊರಬಿದ್ದಿದೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಅಹವಾಲನ್ನು ಆಲಿಸಿದ ಬಳಿಕ ಸಮಿತಿ ಈ ಆದೇಶವನ್ನು ನೀಡಿದೆ.

    ಇದನ್ನೂ ಓದಿ: ಈ ದೇವಸ್ಥಾನದಲ್ಲಿ ಮಹಿಳೆಯರಿಗಷ್ಟೇ ಗರ್ಭಗುಡಿಗೆ ಪ್ರವೇಶ, ಪೂಜಿಸಲು ಅವಕಾಶ: ಮುಟ್ಟಾಗಿದ್ದರೂ ಇಲ್ಲಿ ಮೈಲಿಗೆಯಲ್ಲ!

    ಸಿಡಬ್ಲ್ಯುಆರ್​ಸಿ ಹೊಸ ಆದೇಶದ ಪ್ರಕಾರ ಕರ್ನಾಟಕ ನ. 1ರಿಂದ 15ರ ವರೆಗೆ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸಬೇಕಾಗಿದೆ. ಬಿಳಿಗುಂಡ್ಲು ಮೂಲಕ ಈ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.

    ಜಲಾಶಯಗಳಿಗೆ ನೀರಿನ ಹರಿವು ಬಹುತೇಕ ಇಲ್ಲವಾಗಿರುವುದರಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ತರುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಕರ್ನಾಟಕ ಮನವಿ ಮಾಡಿಕೊಂಡಿದ್ದರೂ ಈ ಆದೇಶ ಹೊರಬಿದ್ದಿದೆ ಎನ್ನಲಾಗಿದೆ.

    ಸಾಫ್ಟ್​ವೇರ್​ ಉದ್ಯೋಗ: ಫ್ರೆಷರ್ಸ್​ಗೆ ಭಾರತದಲ್ಲೇ ಕಡಿಮೆ ಸಂಬಳ, ಜಾಸ್ತಿ ಕೆಲಸ!

    ಫ್ರೆಷರ್ಸ್​ಗೆ ಹೋಲಿಸಿದ್ರೆ ಇನ್​ಫೊಸಿಸ್ ಸಿಇಒ ಸಂಬಳ 2,200 ಪಟ್ಟು ಹೆಚ್ಚು!; ಅವರು ಎಷ್ಟು ಗಂಟೆ ಕೆಲಸ ಮಾಡ್ತಾರೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts