ಬೆಂಗಳೂರು: ಲಾಕ್ಡೌನ್ ನಡುವೆಯೂ ರಾಜ್ಯದಲ್ಲಿ ನೇಮಕಾತಿಗಳ ಭರಾಟೆ ಮುಂದುವರಿದಿದೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಲ್ಲಾವಾರು ಸಮಾಲೋಚಕರನ್ನು ನೇಮಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಜತೆಗೆ, ನಾಡಕಚೇರಿಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ಗಳ ಭರ್ತಿಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಈಗಾಗಲೇ ನಿರ್ದೇಶನಾಲಯ ಸೂಚಿಸಿದೆ.
ಪೊಲೀಸ್ ಇಲಾಖೆಯಲ್ಲಿಯೂ 2,672 ಕಾನ್ಸ್ಟೆಬಲ್ ಹುದ್ದೆ ಹಾಗೂ 162 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ನಾಡಕಚೇರಿಗಳಿಗೆ ಬೇಕಾಗಿದ್ದಾರೆ ಡೇಟಾ ಎಂಟ್ರಿ ಆಪರೇಟರ್ಸ್, ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ನಡೆಯಲಿದೆ ನೇಮಕಾತಿ
ಇದೀಗ ಮತ್ತೆ 556 ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಗಳನ್ನು ಆರಂಭಿಸಿದೆ. ಇದರಲ್ಲಿ 125 ಹುದ್ದೆಗಳು ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಮೀಸಲಾಗಿವೆ. 431 ಹುದ್ದೆಗಳು ಉಳಿದ ವೃಂದಕ್ಕೆ ಮೀಸಲಾಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಹುದ್ದೆಗಳಿಗೆ ಜೂನ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಘಲಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ವಿವರಗಳಿಗೆ https://www.ksp.gov.in/ ಲಾಗಿನ್ ಆಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 2,672 ಕಾನ್ಸ್ಟೆಬಲ್, 162 ಎಸ್ಐ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ