ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ; ಮರ ಬಿದ್ದು ಬೈಕ್ ಸವಾರ ಮೃತ್ಯು

ಚಿಕ್ಕಮಗಳೂರು: ರಾಜ್ಯದ ಹಲವೆಡೆ ಇಂದು ಮಧ್ಯಾಹ್ನದ ಬಳಿಕ ಧಾರಾಕಾರ ಮಳೆಯಾಗಿದ್ದು, ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗಿದ್ದು, ಬೈಕ್ ಸವಾರರೊಬ್ಬರ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೇಣುಗೋಪಾಲ್(58) ಮೃತ ವ್ಯಕ್ತಿ. ಮೂಡಿಗೆರೆಯಿಂದ ಚಿಕ್ಕಳ್ಳಕ್ಕೆ ವೇಣುಗೋಪಾಲ್ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಳ್ಳದ ಗಂಡಿ ಎಂಬಲ್ಲಿ ಬೈಕ್​ನ ಮೇಲೆ ಮರ ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಷ್ಟು ಕೋರಿಕೊಂಡರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ; ವೈದ್ಯರು-ಸಿಬ್ಬಂದಿ ನಿರ್ಲಕ್ಷ್ಯಕ್ಕೆ … Continue reading ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆ; ಮರ ಬಿದ್ದು ಬೈಕ್ ಸವಾರ ಮೃತ್ಯು