ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನಂದೇ ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಯಡಿಯೂರಪ್ಪ, ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಯಳನ್ನು ಘೋಷಿಸಿದ್ದಾರೆ.
- ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದು ಉದ್ಯೋಗಿಗಳಿಗೆ ಅನುಕೂಲ ಕಲ್ಪಿಸುವುದು.
- ಆಸ್ಪತ್ರೆ, ವೈದ್ಯಕೀಯ, ಆರೈಕೆ ಮತ್ತಿತರ ಸೇವಾ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉದ್ಯಮಿಗಳಿಗೆ ಮಹಿಳಾ ಅಭಿವೃದ್ಧಿ ನಿಗಮ/ಕರ್ನಾಟಕ ಹಣಕಾಸು ಸಂಸ್ಥೆ ಮೂಲಕ 2 ಕೋಟಿ ರೂ.ವರೆಗೆ ಶೇ.4ರ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಸೌಲಭ್ಯ
- ಸಂಜೀವಿನಿ ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳು ಕೇಟರಿಂಗ್, ಸ್ವಚ್ಛತಾ ಕಾರ್ಯ, ಕೋಳಿ ಸಾಖಾಣಿಕೆ, ಕುರಿ ಸಾಕಾಣಿಕೆ, ಘನ ತ್ಯಾಜ್ಯ ನಿರ್ವಹಣೆ, ಸ್ವಚ್ಛತೆ, ನಿರ್ಮಾಣ ಮತ್ತಿತರ ಕ್ಷೇತ್ರಗಳ 6 ಸಾವಿರ ಅತಿ ಸಣ್ಣ ಉದ್ಯಮಗಳನ್ನು ಸ್ಥಾಪಿಸಲು ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಬೆಂಬಲ. ಪರಿಣಾಮ 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗದ ಅವಕಾಶ
- ಹಪ್ಪಳ, ಉಪ್ಪಿನಕಾಯಿ, ರೊಟ್ಟಿ, ಮಲಾಸೆಪುಡಿ ಮತ್ತಿತರ ಆಹಾರ ಪದಾರ್ಥಗಳನ್ನು ತಯಾರಿಸುವ ಮಹಿಳೇಯರ ಸಣ್ಣ ಉದ್ಯಮಗಳಿಗೆ ಆಹಾರ ಸುರಕ್ಷತೆ, ಪ್ಯಾಕೇಜಿಂಗ್, ಬ್ರಾಂಡಿಂಗ್, ರಸ್ತೆ ಬದಿ ಮಳಿಗೆಗಳ ಮತ್ತು ಆನ್ಲೈನ್ ಮೂಲಕ ವ್ಯಾಪಾರ ವಹಿವಾಟಿಗೆ ವ್ಯವಸ್ಥೆ
- ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ
- ನಿರ್ಭಯಾ ಯೋಜನೆ ಅಡಿಯಲ್ಲಿ 7,500 ಸಿಸಿಟಿವಿ ಅಳವಡಿಕೆ
- ಮಹಿಳೆಯರ ಅಭಿವೃದ್ಧಿಗೆ 37,000 ಕೋಟಿ ರೂ. ಮೀಸಲು
- ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ಪಾಸ್ ವ್ಯವಸ್ಥೆ