ಬೆಂಗಳೂರು: ಕರೊನಾ ಸಂಕಷ್ಟದ ನಡುವೆಯೂ ಇಂದು ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಲವು ಪ್ರಮುಖ ಯೋಜನೆ-ಕಾರ್ಯಕ್ಕೆ ಕೋಟ್ಯಂತರ ಹಣ ಮೀಸಲಿಟ್ಟಿದ್ದಾರೆ. ಅವುಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
- ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂಪಾಯಿ
- ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ.
- ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕವನ್ನು ರಾಜ್ಯಾದ್ಯಂತ ರಂಗಾಯಣಗಳ ಮೂಲಕ ನಾಟಕ ಪ್ರದರ್ಶನಕ್ಕೆ 1 ಕೋಟಿ
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. - ಕೃಷಿ ಸಂಚಯ ಯೋಜನೆಗೆ 831 ಕೋಟಿ ರೂ. ಮೀಸಲು
- ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಘೋಷಣೆ
- ಬಸವಣ್ಣ ಜನ್ಮ ಸ್ಥಳ ಬಸವನಬಾಗೇವಾಡಿಯ ಇಂಗಳೇಶ್ವರ ಗ್ರಾಮ ಅಭಿವೃದ್ಧಿಗೆ 5 ಕೋಟಿ ರೂ.
- ಕಬಿನಿ ಆಣೆಕಟ್ಟಿನಲ್ಲಿ ಕೆಆರ್ಎಸ್ ಮಾದರಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ
- ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ಅನುದಾನ
- ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ
- ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ
- ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ
- ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ
- 10 ಕೋಟಿ ರೂ. ವೆಚ್ಚದಲ್ಲಿ ಚಿಗುರು ಕಾರ್ಯಕ್ರಮ
- ಶಿವಮೊಗ್ಗ, ಮೈಸೂರಿನಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ
- ಕಳಸಾ ಬಂಡೂರಿ ಯೋಜನೆಗೆ 1677 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ
- ಭದ್ರಾ ಮೇಲ್ದಂಡೆ ಯೋಜನೆಗೆ 21,474 ಕೋಟಿ ರೂ. ಅನುಮೋದನೆ
- ಕೃಷ್ಣಾ ಭಾಗ್ಯ ಜಲನಿಗನ ನಿಯಮಿತಕ್ಕೆ 5600 ಕೋಟಿ ರೂಪಾಯಿ
- 58 ಆಣೆಕಟ್ಟು ಪುನಶ್ಚೇತನಕ್ಕೆ 1500 ಕೋಟಿ ರೂಪಾಯಿ
- ಅಲ್ಪಸಂಖ್ಯಾತರ ಅಭಿವೃದ್ಧಿಗೆ 1500 ಕೋಟಿ ರೂ. ಅನುದಾನ
- ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂಪಾಯಿ
- ಚಾಮರಾಜನಗರ ಜಿಲ್ಲೆಯ ಬೂದಿಪಡಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆನೆ ಶಿಬಿರ ಆರಂಭ
- ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 31,028 ಕೋಟಿ ರೂಪಾಯಿ
- ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 62,150 ಕೋಟಿ
- ಆರ್ಥಿಕ ಮತ್ತು ಅಭಿವೃದ್ಧಿ ವಲಯಕ್ಕೆ 52,529 ಕೋಟಿ
- ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 7,795 ಕೋಟಿ ರೂಪಾಯಿ
- ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 2,645 ಕೋಟಿ ರೂ. ಅನುದಾನ