ಬೆಂಗಳೂರು: ಇಂದು ಬೆಳಗ್ಗೆಯಿಂದ ಇಲ್ಲಿಯವರೆಗೆ ಆರು ಹೊಸ ಸೋಂಕು ಪ್ರಕರಣ ಪತ್ತೆಯಾಗಿತ್ತು, ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 359ಕ್ಕೆ ಏರಿದೆ.
ನಿನ್ನೆ ಸಂಜೆಯಿಂದ ಇಂದು ಸಂಜೆಯವರೆಗೆ 44 ಹೊಸ ಪ್ರಕರಣ ದಾಖಲಾಗಿದೆ. ಇಲ್ಲಿಯವರೆಗೆ 88 ಮಂದಿ ಸೋಂಕಿತರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ. ಸಾವಿನ ಸಂಖ್ಯೆ 13ಕ್ಕೆ ಸ್ಥಿರವಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು ಎಂಬ ಮಾಹಿತಿ ಇಲ್ಲಿದೆ, ಉಳಿದ ಜಿಲ್ಲೆಗಳು ಸೋಂಕು ಮುಕ್ತವಾಗಿವೆ.
ಬೆಂಗಳೂರು: 86 ಮಂದಿಗೆ ಸೋಂಕು ತಗುಲಿದ್ದು, 41 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಮೂವರು ಮೃತಪಟ್ಟಿದ್ದಾರೆ.
ಮೈಸೂರು: 73 ಮಂದಿ ಸೋಂಕಿತರಾಗಿದ್ದು 12 ಮಂದಿ ಬಿಡುಗಡೆಯಾಗಿದ್ದಾರೆ.
ಬೆಳಗಾವಿ: 41 ಮಂದಿ ಸೋಂಕಿತರಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ.
ಕಲಬುರಗಿ: 20 ಮಂದಿ ಸೋಂಕಿತರಾಗಿದ್ದು ಮೂವರು ಬಿಡುಗಡೆ ಹೊಂದಿದ್ದು ಮೂರು ಮಂದಿ ಮೃತಪಟ್ಟಿದ್ದಾರೆ.
ಬಾಗಲಕೋಟೆ: 14 ಸೋಂಕು ಪ್ರಕರಣವಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ: 16 ಮಂದಿ ಸೋಂಕು ಪೀಡಿತರಾಗಿದ್ದು ಎಂಟು ಮಂದಿ ಬಿಡುಗಡೆಯಾಗಿದ್ದರೆ ಇಬ್ಬರು ಮೃತಪಟ್ಟಿದ್ದಾರೆ.
ಉತ್ತರ ಕನ್ನಡ: 11 ಮಂದಿಗೆ ಸೋಂಕು ತಗುಲಿದ್ದು 8 ಮಂದಿ ಬಿಡುಗಡೆಯಾಗಿದ್ದಾರೆ.
ವಿಜಯಪುರ: 19 ಮಂದಿ ಸೋಂಕುಪೀಡಿತರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಧಾರವಾಡ: ಆರು ಮಂದಿಗೆ ಸೋಂಕು ತಗುಲಿದ್ದು ಒಬ್ಬರು ಬಿಡುಗಡೆಯಾಗಿದ್ದಾರೆ.
ಉಡುಪಿ: ಮೂವರಿಗೆ ಸೋಂಕು ತಗುಲಿದ್ದು ಇಬ್ಬರು ಬಿಡುಗಡೆಯಾಗಿದ್ದಾರೆ.
ದಾವಣಗೆರೆಯಲ್ಲಿ ಇಬ್ಬರು ಹಾಗೂ ಚಿತ್ರದುರ್ಗದಲ್ಲಿ ಒಬ್ಬರಿಗೆ ಸೋಂಕು ತಗುಲಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ.
ತುಮಕೂರು: ಇಬ್ಬರಿಗೆ ಸೋಂಕು ತಗುಲಿದ್ದು ಒಬ್ಬರು ಮೃತಪಟ್ಟಿದ್ದಾರೆ.
ಗದಗ: ಸೋಂಕು ಪೀಡಿತರಾಗಿದ್ದ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.