ಬೆಂಗಳೂರು: ಲಾಂಛನದಲ್ಲಿ ಕನ್ನಡ ಪದಗಳನ್ನು ಬಳಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ.
ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕನ್ನಡ ಕಡೆಗಣಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರಾಧಿಕಾರವು ಕ್ರಿಕೆಟ್ ಸಂಸ್ಥೆಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿತ್ತು. ಈ ಬಗ್ಗೆ ಸಂಸ್ಥೆಯು ಸ್ಪಷ್ಟೀಕರಣ ನೀಡಿದ್ದು, ಮಹಾರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸಮಾರಂಭದಲ್ಲಿ ಅಚಾತುರ್ಯದಿಂದ ಕನ್ನಡ ಲಕ ಇರಲಿಲ್ಲ. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದೆ.
ಇದಕ್ಕೆ ಪ್ರತಿಯಾಗಿ ಪತ್ರ ಬರೆದಿರುವ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ತಮ್ಮ ಸಂಸ್ಥೆಯ ಲಾಂಛನ ಸಂಪೂರ್ಣ ಆಂಗ್ಲಮಯವಾಗಿದೆ. ಕನ್ನಡ ಬೆಳೆಸುವ ನಿಟ್ಟಿನಲ್ಲಿ ಆದಷ್ಟು ಬೇಗ ಲಾಂಛನದಲ್ಲಿ ಕನ್ನಡ ಪದಗಳನ್ನು ಬಳಸಬೇಕು ಎಂದು ಸೂಚಿಸಿದ್ದಾರೆ.