<<ರಾಜ್ಯ ಜನತೆಗೆ ಗುಡ್ ನ್ಯೂಸ್ ನೀಡಿದ ಸಿಎಂ ಎಚ್ಡಿಕೆ>>
ಕಲಬುರಗಿ: ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೇರಿಕೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕನಿಷ್ಠ 2.ರೂಪಾಯಿಗೆ ಇಳಿಸಲಾಗುವುದು ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಲಬುರಗಿಯ ಹೈದರಾಬಾದ್ ವಿಮೋಚನಾ ದಿನಾಚಣೆಯಲ್ಲಿ ಮಾತನಾಡುವಾಗ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ ಸಿಎಂ, ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಿ ರಾಜ್ಯದ ಜನತೆಯ ಹೊರೆ ಕಡಿಮೆ ಮಾಡುವ ಮೂಲಕ ಸರ್ಕಾರ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದರು.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಇಂದು ಎಚ್ಡಿಕೆ ಅಧಿಕೃತ ಆದೇಶ ಹೊರಡಿಸಿದ್ದಾರೆ.
Today, we are taking a decision that we are going to reduce Rs 2 on both petrol and diesel: Karnataka Chief Minister HD Kumaraswamy in Kalaburagi #Karnataka pic.twitter.com/COyYWzFAmy
— ANI (@ANI) September 17, 2018
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಿಸಿಯನ್ನು ಕಡಿಮೆ ಮಾಡಲು ಈಗಾಗಲೇ ರಾಜಸ್ಥಾನ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ತೆರಿಗೆಯನ್ನು ಕಡಿತ ಮಾಡಿವೆ. (ದಿಗ್ವಿಜಯ ನ್ಯೂಸ್)