More

    ರಾಜ್ಯದಲ್ಲಿ ಮಿತಿ ಮೀರಿದ ಕರೊನಾ ಹಾವಳಿ; ಇಂದು ಕೂಡ ಸೋಂಕಿತರು ಮತ್ತು ಮೃತರ ಸಂಖ್ಯೆಯಲ್ಲಿ ಹೆಚ್ಚಳ!

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಹಾವಳಿ ಹೆಚ್ಚಾಗುತ್ತಿದ್ದು, ಇಂದು 47,754 ಜನರಿಗೆ ಸೋಂಕು ತಗುಲಿದೆ. ಒಟ್ಟು 29 ಮಂದಿ ಕೋವಿಡ್​​ನಿಂದ ಮೃತಪಟ್ಟಿದ್ದಾರೆ. ನಿನ್ನೆಗೆ ಹೋಲಿಕೆ ಮಾಡಿದಾಗ ರಾಜ್ಯದಲ್ಲಿ ಇಂದು ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.

    ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಟ್ವೀಟ್ ಮಾಡಿದ್ದಾರೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 47,754 ಸಕ್ರಿಯ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲೇ ಅತ್ಯಧಿಕ 30,540 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ.

    ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ರೇಟ್​ ಶೇ. 18.48ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 22,143 ಜನರು ಕೋವಿಡ್​ನಿಂದ ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ದಾರೆ. ರಾಜ್ಯದಲ್ಲಿ ಕರೊನಾ ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲೇ 8 ಜನರು ಮೃತರಾಗಿದ್ದಾರೆ.

    ಲಾಹೋರ್​​ನ ಅನಾರ್ಕಲಿ ಮಾರುಕಟ್ಟೆಯಲ್ಲಿ ಪ್ರಬಲ ಬಾಂಬ್​​ ಸ್ಫೋಟ; ಮೂವರು ಸಾವು!

    ಜೀವನದಲ್ಲಿ ರಾಕ್ಷಸರು ಬಂದ್ ಹೋಗ್ತಿರ್ತಾರೆ; ಸೂರ್ಯ ಸೂರ್ಯನೇ, ಚಂದ್ರ ಚಂದ್ರನೇ; ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ರಾ ಹೆಬ್ಬಾಳ್ಕರ್?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts