ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಘೋಷಿಸಲಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಇಂದು ವಿಧಾನಸೌಧದ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಪುನೀತ್ಗೆ ಮರಣೋತ್ತರವಾಗಿ ನೀಡಲಾದ ಈ ಪ್ರಶಸ್ತಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಸ್ವೀಕರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನಿಕಾಂತ್, ಜೂ.ಎನ್ಟಿಆರ್ ಅವರು ಜೊತೆಯಾಗಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಅದೇ ಸಮಯದಲ್ಲಿ ವರುಣ ಸಿಂಚನವಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದಲೂ ಹರ್ಷೋದ್ಗಾರ ಹೊರಹೊಮ್ಮಿತು. ಮಳೆಯ ನಡುವೆಯೇ ಪ್ರಶಸ್ತಿ ಪ್ರದಾನ ನೆರವೇರಿತು.
‘ಪ್ರಗತಿ’ಯ ಹೊಳಪಲ್ಲಿ ರಿಷಬ್ ಶೆಟ್ಟಿ; ಹಳೇದನ್ನೆಲ್ಲ ನೆನಪಿಸಿಕೊಂಡು ಆ ಮೊದಲ ಫೋಟೋ ಹಂಚಿಕೊಂಡ ನಟ-ನಿರ್ದೇಶಕ