ಪುಳ್ಕೂರು ದೇವಳದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ

Ksd_Deepotsava

ಕಾಸರಗೋಡು: ಮಧೂರು ಸಮೀಪದ ಪುಳ್ಕೂರು ಶ್ರೀ ಮಹಾದೇವ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಕಾರ್ತಿಕ ದೀಪೋತ್ಸವ ಶನಿವಾರ ಆರಂಭಗೊಂಡಿತು. ಬ್ರಹ್ಮಶ್ರೀ ಇರುವೈಲು ಕೃಷ್ಣದಾಸ ತಂತ್ರಿ ನೇತೃತ್ವದಲ್ಲಿ ಗಣಪತಿ ಹೋಮ, ರಕ್ತೇಶ್ವರಿ ತಂಬಿಲ, ನಾಗತಂಬಿಲ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ಶ್ರೀ ಅನಂತಪದ್ಮನಾಭ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸಂಕೀರ್ತನ ಸೇವೆ ಜರುಗಿತು. ಪುಳ್ಕೂರು ಶ್ರೀ ಮಹಾದೇವ ಭಜನಾ ಸಂಘದ ವತಿಯಿಂದ ಧಾರ್ಮಿಕ ಮುಂದಾಳು ಡಾ.ವೆಂಕಟರಮಣ ಹೊಳ್ಳ ಕಾಸರಗೋಡು ಅವರಿಗೆ ಗೌರವ ಸನ್ಮಾನ ನಡೆಯಿತು.

ಕ್ಷೇತ್ರದ ತಂತ್ರವರ್ಯ ಬ್ರಹ್ಮಶ್ರೀ ಇರುವೈಲು ಕೃಷ್ಣ ದಾಸ ತಂತ್ರಿ ಸನ್ಮಾನಿಸಿದರು. ಪ್ರತಿ ದಿನ ಸಂಜೆ 7 ಗಂಟೆಗೆ ಭಜನೆ ಪ್ರಾರಂಭವಾಗಿ ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಡೆಯಲಿರುವುದು. ಪ್ರತಿದಿನ ಆಹ್ವಾನಿತ ಭಜನಾ ತಂಡಗಳಿಂದ ಭಜನೆ ಮತ್ತು ಮಹಾಪೂಜೆ ನಡೆಯುವುದು. ಡಿ.2ರಂದು ಕಾರ್ತಿಕ ದೀಪೋತ್ಸವ ಬಲಿವಾಡುಕೂಟದೊಂದಿಗೆ ಸಂಪನ್ನಗೊಳ್ಳಲಿರುವುದು.

ಪ್ರಕೃತಿಯೊಂದಿಗೆ ಮಾನವ ಸಂಬಂಧ ಬೆಸೆಯಲು ಹಬ್ಬ ಪೂರಕ

ಮುಸ್ಲಿಂ ಒಲೈಕೆಯಿಂದ ರೈತರಿಗೆ ಆತ್ಮಹತ್ಯೆಯ ಸ್ಥಿತಿ

 

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…