ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಲ್ಲಿ ಕರೊನಾ ಸೊಂಕು ದೃಢಪಟ್ಟಿದೆ.
ಈ ಬಗ್ಗೆ ಕಾರ್ತಿ ಅವರು ಟ್ವೀಟ್ ಮಾಡಿದ್ದಾರೆ. ನನ್ನಲ್ಲಿ ಕರೊನಾದ ಪ್ರಾಥಮಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದೆ. ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ತಲಾಖ್ ಎಂದ ತಕ್ಷಣ ಅದು ಕಾನೂನು ಸಮ್ಮತವಾಗುವುದಿಲ್ಲ: ಈ ಮಾತು ಈಗ್ಯಾಕೆ?
ಹಾಗೇ, ಇತ್ತೀಚೆಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಕಾರ್ತಿ ಅವರು ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದಾರೆ. ನಿನ್ನೆ ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್, ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗೆ ಒಬ್ಬೊಬ್ಬರೇ ರಾಜಕಾರಣಿಗಳಲ್ಲಿ ಕರೊನಾ ವೈರಸ್ ಕಾಣಿಸಿಕೊಳ್ಳುತ್ತಿದೆ. (ಏಜೆನ್ಸೀಸ್)
ಕೊವಿಡ್-19 ಸೋಂಕಿಗೆ ಒಳಗಾದ ಅಮಿತ್ ಷಾ ನಡೆ ಬಗ್ಗೆ ಅಚ್ಚರಿ, ಅನುಮಾನ ವ್ಯಕ್ತಪಡಿಸಿದ ಶಶಿ ತರೂರ್