More

    ಫೆ.3ರಂದು ಕಲಬುರಗಿಗೆ ಕಸಾಪ ಅಧ್ಯಕ್ಷ ಬಳಿಗಾರ


    ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಫೆ.3ರಂದು ನಗರಕ್ಕೆ ಬರಲಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಬೆಳಗ್ಗೆ 11.25ಕ್ಕೆ ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
    ಮಧ್ಯಾಹ್ನ 1.30ಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಥಳ ಪರಿಶೀಲನೆ ನಡೆಸಿ, ಸ್ವಾಗತ ಸಮಿತಿ ಸದಸ್ಯರು ಹಾಗೂ ಕಸಾಪ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 5ಕ್ಕೆ ಜೇವರ್ಗಿ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಸಾಪದ ಕನ್ನಡ ಭವನ ಉದ್ಘಾಟಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
    4ರಂದು ಬೆಳಗ್ಗೆ 10ಕ್ಕೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥಿಗಳು ವಾಸ್ತವ್ಯ ಮಾಡುವ ಕೊಠಡಿಗಳ ಪರಿಶೀಲನೆ, ಊಟದ ವ್ಯವಸ್ಥೆ, ಪುಸ್ತಕ ಮಳಿಗೆ ಮತ್ತು ಇತರೆ ವ್ಯವಸ್ಥೆಗಳ ಪರಿಶೀಲನೆ ಮಾಡಿ ಗಣ್ಯರೊಂದಿಗೆ ಸಮಾಲೋಚನೆ ಸಭೆ ನಡೆಸುವರು. ಸಂಜೆ 6.30ಕ್ಕೆ ಕಲಬುರಗಿ ರಂಗಾಯಣದಲ್ಲಿ ನಾಟಕೋತ್ಸವ ಉದ್ಘಾಟಿಸುವರು.
    5ರಂದು ಬೆಳಗ್ಗೆ 8ಕ್ಕೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಧ್ವಜಾರೋಹಣ ಕಾರ್ಯಕ್ರಮ, ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹಾಗೂ 11.30ಕ್ಕೆ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಆಶಯ ನುಡಿಗಳನ್ನಾಡುವರು. ನಂತರ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. 6ರಂದು ಸಂಜೆ 7.30ಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಭವನದಲ್ಲಿ ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸುವರು. 7ರಂದು ಸಮ್ಮೇಳನದ ಬಹಿರಂಗ ಅಧಿವೇಶನ ಹಾಗೂ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. 8ರಂದು ಬೆಳಗ್ಗೆ 11.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts