ಕಾಸರಗೋಡು: ಎಣ್ಮಕಜೆ ಪಂಚಾಯಿತಿಯ ಕಾಟುಕುಕ್ಕೆ ಸನಿಹದ ಪಿಲಿಂಗಲ್ಲು ನಿವಾಸಿ, ಫಕೀರ ನಾಯ್ಕ ಎಂಬುವರ ಪುತ್ರ ಚೇತನ್(25) ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಎಂಡೋಸಲ್ಫಾನ್ ದುಷ್ಪರಿಣಾಮದಿಂದ ಬಳಲುತ್ತಿದ್ದ ಅವರು, ಕಾಸರಗೋಡಿನ ಜನರಲ್ ಆಸ್ಪತ್ರೆ ಸಹಿತ ವಿವಿಧೆಡೆ ಚಿಕಿತ್ಸೆ ಪಡೆದಿದ್ದರು. ಎಣ್ಮಕಜೆ ಪಂಚಾಯಿತಿಯ ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯಲ್ಲಿ ಅವರ ಹೆಸರು ಸೇರಿತ್ತು.