More

    ಕವಿತಾಳದಲ್ಲೇ ಪರೀಕ್ಷೆ ಬರೆಯಲು ಅವಕಾಶ- ಬಿಇಒ ಚಂದ್ರಶೇಖರ ದೊಡ್ಡಮನಿ ಹೇಳಿಕೆ

    ಕವಿತಾಳ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿ ಬಾಗಲವಾಡದಲ್ಲಿ ಗ್ರಾಮಸ್ಥರು ನಡೆಸಿರುವ ಪ್ರತಿಭಟನೆ ಮಂಗಳವಾರ ಎರಡು ದಿನ ಪೂರೈಸಿತು.

    ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಗ್ರಾಮಕ್ಕೆ ಭೇಟಿ ಪ್ರತಿಭಟನಾನಿರತರೊಂದಿಗೆ ಚರ್ಚಿಸಿದರು. ಬ್ಯಾಗವಾಟಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಮಂಜೂರಾಗಿದ್ದಕ್ಕೆ ಸಹಕಾರ ನೀಡಬೇಕು. ಈ ಮೂಲಕ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಬಾಗಲವಾಡದಲ್ಲಿ ಪರೀಕ್ಷಾ ಕೇಂದ್ರ ಮಂಜೂರಾಗುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು.

    ಗ್ರಾಮಸ್ಥರ ಹೋರಾಟ ಹಿನ್ನೆಲೆಯಲ್ಲಿ ಬಿಇಒ ಮೇಲಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದರು. ಬಳಿಕ ಮಾತನಾಡಿ, ಬ್ಯಾಗವಾಟ ಗ್ರಾಮಕ್ಕೆ ಮಂಜೂರಾಗಿರುವ ಪರೀಕ್ಷಾ ಕೇಂದ್ರ ರದ್ದುಪಡಿಸಿ ಈ ಮೊದಲಿನಂತೆ ಕವಿತಾಳದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದರು. ಬಿಇಒ ಭರವಸೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts