ಪೊಸಡಿ ಗುಂಪೆ ನಿಸರ್ಗಧಾಮದಲ್ಲಿ ‘ಕವಿತಾ ಕೌತುಕ’

sahithya

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ವತಿಯಿಂದ ಕವಿತಾ ಕೌತುಕ ಸರಣಿ ಕಾರ್ಯಕ್ರಮ ಉದ್ಘಾಟನೆ ಪೈವಳಿಕೆ ಪೊಸಡಿ ಗುಂಪೆಯ ನಿಸರ್ಗಧಾಮದಲ್ಲಿ ಇತ್ತೀಚೆಗೆ ನಡೆಯಿತು.

blank

ನಿಸರ್ಗಧಾಮದ ಮಾಲಿಕ ಮಾಧವ ಸಮಾರಂಭ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು.

ಕವಿಗಳಾದ ಕೆ.ಎ.ಎಂ.ಅನ್ಸಾರಿ, ಥೋಮಸ್ ಡಿಸೋಜ, ವನಜಾಕ್ಷಿ ಪಿ.ಚೆಂಬ್ರಕಾನ, ಸೌಮ್ಯ ಪ್ರವೀಣ್, ಹರ್ಷಿತ ಎಸ್.ಶಾಂತಿಮೂಲೆ, ವಿದ್ಯಾಶ್ರೀ ಜೆ. ಮೊದಲಾದವರು ಕವನವಾಚನ ಮಾಡಿದರು. ಪತ್ರಕರ್ತ ಜಾನ್ ಡಿಸೋಜ, ಧರ್ಮತ್ತಡ್ಕ ಗ್ರಂಥಾಲಯ ಅಧ್ಯಕ್ಷ ರವಿಲೋಚನ ಸಿ.ಎಚ್, ಕಸಾಪ ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಪಿ, ಇಂದಿರಾ ರವಿ ಬೆಂಗಳೂರು, ಶ್ರೀಧರ ಕುಂಜತ್ತೂರು, ಮಾಲತಿ ಕಣ್ಣನ್, ರವೀಂದ್ರನಾಥ ಪಾವಲ್ಕೋಡಿ, ಚಂದ್ರಾವತಿ ದಾಮೋದರ, ಶ್ರೀರಾಮ ಭಟ್ ಪ್ರಶಸ್ತಿ ಪತ್ರ ವಿತರಿಸಿದರು.

ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪ್ರೊ.ಪಿ.ಎನ್.ಮೂಡಿತ್ತಾಯ ಸಮಾರೋಪ ಭಾಷಣ ಮಾಡಿದರು. ಬೆಂಗಳೂರು ಶಂಪಾ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಪ್ರಮೀಳಾ ಮಾಧವ ಸ್ವಾಗತಿಸಿದರು. ಕಸಾಪ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…