ನಾಲ್ಕನೇ ದಿನಕ್ಕೆ ಕಾಲಿಟ್ಟ ಕೆಡಿಪಿ ಸದಸ್ಯರ ಧರಣಿ

blank

ಚನ್ನರಾಯಪಟ್ಟಣ : ತ್ರೈಮಾಸಿಕ ಕೆಡಿಪಿ ಸಭೆ ನಡೆಸುವಂತೆ ಆಗ್ರಹಿಸಿ ಕೆಡಿಪಿ ನಾಮನಿರ್ದೇಶಿತ ಸದಸ್ಯರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಸುತ್ತಿರುವ ಪ್ರತಿಭಟನೆ ಗುರುವಾರ ಮೂರನೇ ದಿನ ಪೂರೈಸಿದೆ.
ಪ್ರತಿಭಟನಕಾರರು ಕಪ್ಪುಪಟ್ಟ ಧರಿಸಿ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆ ಪೂರೈಕೆಗೆ ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಕರೆಯದೇ ಒಂದಿಲ್ಲೊಂದು ಸಬೂಬು ಹೇಳಿಕೊಂಡು ಬರುತ್ತಿರುವ ಕೆಡಿಪಿ ಸಭೆಯ ಅಧ್ಯಕ್ಷರಾದ ಶಾಸಕ ಸಿ.ಎನ್.ಬಾಲಕೃಷ್ಣ ಮತ್ತು ಸದಸ್ಯ ಕಾರ್ಯದರ್ಶಿ ತಾಪಂ ಇಒ ಜಿ.ಆರ್.ಹರೀಶ್ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆಗೆ ಕೆಡಿಪಿ ಸದಸ್ಯರಾದ ಗುರುಪ್ರಸಾದ್, ಬ್ಯಾಡರಹಳ್ಳಿ ಯೋಗೀಶ್, ಕಬ್ಬಾಳು ಮಹೇಶ್, ಸರ್ಕಾರದ ನಾಮನಿರ್ದೇಶಿತ ಪುರಸಭಾ ಸದಸ್ಯರು, ಆರೋಗ್ಯ ರಕ್ಷ ಸಮಿತಿ ಸದಸ್ಯರು, ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರು, ರೈತ ಸಂಘದ ಮುಖಂಡರು, ಕಾಂಗ್ರೆಸ್ ಮುಖಂಡರು ಬೆಂಬಲ ಸೂಚಿಸಿ ಭಾಗವಹಿಸಿದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…