ಕಲಬುರಗಿ: ರೈತ ಹೋರಾಟಗಾರರು, ಜೇವರ್ಗಿ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುವುದು ನಿಶ್ಚಿತವಾಗಿದೆೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಬುಧವಾರ (ಏ.೫ರಂದು) ಕಲಬುರಗಿಯ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ತಮ್ಮ ಅಪಾರ ಬೆಂಬಲಿಗರು, ಅನುಯಾಯಿಗಳ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ೧೧.೪೫ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ನ ಮುಖಂಡರು, ವರಿಷ್ಠರ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು.
ಜೇವರ್ಗಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕೇದಾರಲಿಂಗಯ್ಯ ಕಾಂಗ್ರೆಸ್ ಸೇರುವ ಕುರಿತು ಹಲವು ದಿನಗಳಿಂದ ವದಂತಿಗಳಿದ್ದು, ಎಲ್ಲ ಸುದ್ದಿಗಳಿಗೆ ಇದೀಗ ಅಧಿಕೃತ ತೆರೆ ಬಿದ್ದಿದೆ. ಈ ಮೂಲಕ ಜೇವರ್ಗಿಯಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ನೇರಾ ನೇರ ಫೈಟ್ ಫಿಕ್ಸ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ.