More

    ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಸೇರಿದ ‘ಪ್ರಗತಿಯ ಪ್ರತಿಮೆ’; ಅತಿ ಎತ್ತರದ ಕಂಚಿನ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರ..

    ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂಬ ಹೆಸರಿನಲ್ಲಿ ಸ್ಥಾಪಿತಗೊಂಡಿರುವ, ರಾಜಧಾನಿ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಪಾತ್ರವಾಗಿದೆ.

    ಪಟ್ಟಣವನ್ನು ನಿರ್ಮಿಸಿದವರ ಹೆಸರಿನಲ್ಲಿ ಸ್ಥಾಪನೆಗೊಂಡಿರುವ ಪ್ರಥಮ ಹಾಗೂ ಅತಿ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ ಎಂದು ಲಂಡನ್​ನ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ ಈ ಪ್ರಗತಿಯ ಪ್ರತಿಮೆಯನ್ನು ಪರಿಗಣಿಸಿದೆ. ಈ ಪ್ರತಿಮೆಯು 108 ಅಡಿ ಎತ್ತರವಿದ್ದು, 4 ಟನ್ ತೂಕದ ಖಡ್ಗವನ್ನೂ ಹೊಂದಿದೆ.

    ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಸೇರಿದ 'ಪ್ರಗತಿಯ ಪ್ರತಿಮೆ'; ಅತಿ ಎತ್ತರದ ಕಂಚಿನ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರ..

    “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂತಸವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ಈ ಪ್ರಗತಿಯ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

    ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತಕ್ಕೀಡಾಗಿ ಸಾವು!

    ಟ್ವಿಟರ್​ ಬಳಿಕ ಮೆಟಾದಲ್ಲೂ ಜಾಬ್​ಕಟ್​; 11 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ತೆಗೆಯಲಿದ್ದಾರೆ ಮಾರ್ಕ್​ ಜುಕರ್​ಬರ್ಗ್​!

    ಹೋಟೆಲ್ ಕಾರ್ಮಿಕನಿಗೆ 55 ಕೋಟಿ ರೂಪಾಯಿ ಜಾಕ್​ಪಾಟ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts