ತಿರುವನಂತಪುರಂ: ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ ಸರ್ಕಾರವು ಲವ್ ಜಿಹಾದ್ ವಿರುದ್ಧ ಕಾನೂನು ತಂದ ಬೆನ್ನಲ್ಲೇ ಇದೀಗ ಕೇರಳದಲ್ಲೂ ಇಂತದ್ದೊಂದು ಕಾನೂನನ್ನು ತರುವುದಾಗಿ ಬಿಜೆಪಿ ಹೇಳಿದೆ. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಲವ್ ಜಿಹಾದ್ ವಿರುದ್ಧ ಕಾನೂನು ತರುವುದಾಗಿ ಪಕ್ಷ ಹೇಳಿಕೊಂಡಿದೆ.
ಲವ್ ಜಿಹಾದ್ ದೇಶಾದ್ಯಂತ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಕೇರಳದಲ್ಲೂ ಈ ರೀತಿಯ ಅಕ್ರಮವನ್ನು ತಡೆಯಬೇಕು ಎನ್ನುವ ಕೂಗಿದೆ. ಕೇವಲ ಹಿಂದೂ ಸಂಘಟನೆಗಳು ಮಾತ್ರವಲ್ಲ, ಕ್ರಿಶ್ಚಿಯನ್ ಸಂಘಟನೆಗಳು, ಚರ್ಚ್ಗಳೂ ಲವ್ ಜಿಹಾದ್ ಕಾನೂನು ತರಬೇಕು ಎಂದು ಒತ್ತಾಯಿಸುತ್ತಿವೆ. ಹಾಗಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಅದನ್ನು ಸೇರಿಸಲಾಗುವುದು. ಲವ್ ಜಿಹಾದ್ನ್ನು ಹೊಡೆದೋಡಿಸಲಾಗುವುದು ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ತಿಳಿಸಿದ್ದಾರೆ.
ಕೇರಳದಲ್ಲಿ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೆಂದು ಎಲ್ಲ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. (ಏಜೆನ್ಸೀಸ್)
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿಯನ್ನೂ ಬೆಂಕಿಗೆ ಎಳೆದುಕೊಂಡ ಯುವತಿ! ಅಪರಾಧಿ ಸಾವು, ಯುವತಿ ಸ್ಥಿತಿ ಗಂಭೀರ