ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಹೊಸ ವೈರಸ್ ಕಾಣಿಸಿಕೊಂಡಿದ್ದು, ಇಬ್ಬರು ವಿದ್ಯಾರ್ಥಿಗಳಲ್ಲಿ ಹೊಸ ಸೋಂಕು ಕಂಡುಬಂದಿರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ.
ತಿರುವನಂತಪುರಂನ ವಿಝಿಂಜಮ್ನಲ್ಲಿ 12 ವಿದ್ಯಾರ್ಥಿಗಳನ್ನು ಫುಡ್ ಪಾಯ್ಸನ್ ಆಗಿ, ಹೊಟ್ಟೆನೋವು, ವಾಂತಿ, ಬೇಧಿಯಿಂದ ಬಳಲುತ್ತಿದ್ದ ಈ ಇಬ್ಬರನ್ನು ತಪಾಸಣೆಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರು ವಿದ್ಯಾರ್ಥಿಗಳಲ್ಲಿ ಈ ಸೋಂಕು ದೃಢವಾಗಿದೆ.
ಸೋಮವಾರ ವರದಿ ಬಂದಿದ್ದು, ಇದರಲ್ಲಿ ನೊರೊವೈರಸ್ ಇರುವುದು ಪತ್ತೆಯಾಗಿದೆ. ಇದೂ ಕೂಡ ಸಾಂಕ್ರಾಮಿಕ ರೋಗದ ವೈರಸ್ಗಳೆಂದು ವೈದ್ಯರು ಹೇಳಿದ್ದಾರೆ.
ಸದ್ಯ ಈ ಬಗ್ಗೆ ವರದಿ ನೀಡುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚಿಸಿದ್ದು, ನಾಗರಿಕರು ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ಅತಿ ವೇಗವಾಗಿ ಹರಡುವ ಸಾಧ್ಯತೆ ಇದ್ದು, ಕೂಡಲೇ ಜನರು ಎಚ್ಚೆತ್ತುಕೊಂಡು ಸಹಕರಿಸಬೇಕೆಂದು ಅವರು ಹೇಳಿದ್ದಾರೆ. (ಏಜೆನ್ಸೀಸ್)
ಲಡಾಖ್ನಲ್ಲೂ ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಬೀಳುತ್ತೆ ದಂಡ : ಈವರೆಗೆ 1.50 ಕೋಟಿ ರೂ. ಸಂಗ್ರಹ