ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಕೇರಳ ಕಾಂಗ್ರೆಸ್ಗೆ ಶಾಕ್ ಎದುರಾಗಿದೆ. ಪಕ್ಷದ ಹಿರಿಯ ನಾಯಕರೊಬ್ಬರು ಪಕ್ಷಕ್ಕೆ ಕೈ ಕೊಟ್ಟಿದ್ದು, ಪಕ್ಷದಲ್ಲಿ ಪ್ರಕಾಪ್ರಭುತ್ವ ಸತ್ತು ಹೋಗಿದೆ ಎನ್ನುವ ಆರೋಪವನ್ನೂ ಮಾಡಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ ಪಿ.ಸಿ.ಚಾಕೊ ರಾಜೀನಾಮೆ ನೀಡಿರುವ ವ್ಯಕ್ತಿ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ನ ಸ್ಥಿತಿ ತೀರಾ ಹೀನಾಯವಾಗಿದೆ. ಇಲ್ಲಿ ಪ್ರಜಾಪ್ರಭುತ್ವವನ್ನು ಪಾಲಿಸಲಾಗುತ್ತಿಲ್ಲ ಬದಲಾಗಿ ಗುಂಪುಗಾರಿಕೆ ಮಾಡಿಕೊಂಡು ಅಧಿಕಾರ ಸಾಧಿಸಲಾಗುತ್ತಿದೆ. ಅದಕ್ಕೇ ಹೆಚ್ಚಿನ ಒತ್ತನ್ನೂ ನೀಡಲಾಗುತ್ತಿದೆ. ಇದರ ಬಗ್ಗೆ ನಾನು ಈಗಾಗಲೇ ಹೈ ಕಮಾಂಡ್ಗೆ ಮಾಹಿತಿ ನೀಡಿದ್ದೇನೆ. ಆದರೆ ಯಾವುದೇ ಉಪಯೋಗವಾಗಿಲ್ಲ. ಹೈ ಕಮಾಂಡ್ ಕೂಡ ಗುಂಪುಗಾರಿಕೆಗೇ ಆದ್ಯತೆ ನೀಡುತ್ತಿರುವುದರಿಂದ ಬೇಸರಗೊಂಡು ನಾನು ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಚಾಕೊ ಅವರು ಕಾಂಗ್ರೆಸ್ನ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ತ್ರಿಶೂರ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಪಕ್ಷದ ವಕ್ತಾರರಾಗಿಯೂ ಸೇವೆ ಸಲ್ಲಿದ್ದರು. 74 ವರ್ಷದ ಹಿರಿಯ ನಾಯಕನ ದಿಢೀರ್ ರಾಜೀನಾಮೆಯು ಕಾಂಗ್ರೆಸ್ಗೆ ದೊಡ್ಡ ಹೊಡೆತವನ್ನು ನೀಡಿದಂತಾಗಿದೆ. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
VIDEO| 60ರ ವೃದ್ಧನ 2ನೇ ಮದುವೆಗೆ ಒಪ್ಪದ ಮಕ್ಕಳು! ವಿದ್ಯುತ್ ಕಂಬವೇರಿ ಕುಳಿತ ವೃದ್ಧ
ಬಾಯ್ಫ್ರೆಂಡ್ ಜತೆ 1 ಗಂಟೆ ಮಾತನಾಡಿ ಸಂಪರ್ಕ ಕಡಿದುಕೊಂಡ ಯುವತಿ ಮನೆಯಲ್ಲೇ ದುರಂತ ಸಾವು!