ಕೊರೊನಾ ವೈರಸ್ ಕಾಯಿಲೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿದ ಕೇರಳ ಸರ್ಕಾರ

blank

ತಿರುವನಂತಪುರ: ರಾಜ್ಯದಲ್ಲಿ ಮೂರನೇ ವಿದ್ಯಾರ್ಥಿಯಲ್ಲೂ ಕೊರೊನಾ ವೈರಸ್​ ಪತ್ತೆಯಾದ ಕಾರಣ, ಈ ಕಾಯಿಲೆಯ ಸನ್ನಿವೇಶವನ್ನು ರಾಜ್ಯ ವಿಪತ್ತು ಎಂದು ಕೇರಳ ಸರ್ಕಾರ ಸೋಮವಾರ ಸಂಜೆ ಘೋಷಿಸಿದೆ.

ಮೂರನೇ ವಿದ್ಯಾರ್ಥಿಯ ತಪಾಸಣೆ ವೇಳೆ ವೈರಸ್​ ಸೋಂಕು ಕುರಿತ ಪಾಸೆಟಿವ್ ಫಲಿತಾಂಶ ಕಂಡು ಬಂದಿದೆ. ಇದು ಹರಡುವ ಸೋಂಕು ಆಗಿರುವ ಕಾರಣ ರಾಜ್ಯ ಇದನ್ನು ವಿಪತ್ತು ಎಂದು ಪರಿಗಣಿಸಿದೆ. ಹೀಗಾಗಿ ಈ ಸೋಂಕು ಕಾಯಿಲೆಯನ್ನು ರಾಜ್ಯ ವಿಪತ್ತು ಎಂದು ಸರ್ಕಾರ ಘೋಷಿಸಿರುವುದಾಗಿ ರಾಜ್ಯ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಹೇಳಿದ್ದಾರೆ.

ಈ ರಾಜ್ಯ ವಿಪತ್ತಿನ ಕಾಯಿಲೆಯನ್ನು ಹಂತ ಹಂತವಾಗಿ ತಡೆಗಟ್ಟುವುದಕ್ಕೆ ಬೇಕಾದ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಂಡಿದೆ. ಪರಿಣಾಮಕಾರಿಯಾಗಿ ಕಾಯಿಲೆಯನ್ನು ನಿಯಂತ್ರಿಸಿ, ತಡೆಗಟ್ಟಲಾಗುವುದು ಎಂದೂ ಅವರು ಆಶ್ವಾಸನೆ ನೀಡಿದರು.

ರಾಜ್ಯ ವಿಪತ್ತು ಎಂದು ಘೋಷಿಸುವುದಕ್ಕೆ ಮುನ್ನ, ಮುಖ್ಯ ಕಾರ್ಯದರ್ಶಿ ಟಾಮ್​ ಜೋಸ್ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಸೇರಿ ಈ ವಿಷಯವಾಗಿ ಚರ್ಚಿಸಿತ್ತು. ಅಲ್ಲಿ ಎಲ್ಲ ಸಾಧಕ-ಬಾಧಕಗಳನ್ನು ಗಮನಿಸಿ ಈ ನಿರ್ಣಯ ತೆಗೆದುಕೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿತ್ತು. (ಏಜೆನ್ಸೀಸ್​)

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…