More

    ಗೌರಿಶಂಕರ್ ನಟನೆಯ ‘ಕೆರೆಬೇಟೆ’ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್..!

    ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ ಶಂಕರ್SRG ನಾಯಕನಾಗಿ ನಟಿಸಿರುವ ಸಿನಿಮಾ. ಈ ಚಿತ್ರಕ್ಕೆ ರಾಜ್ ಗುರು ಆಕ್ಷನ್ ಕಟ್ ಹೇಳಿದ್ದಾರೆ.


    ಈ ಚಿತ್ರಕ್ಕೆ ಜೈ ಶಂಕರ್ ಪಟೇಲ್ ಹಾಗೂ ನಾಯಕ ಗೌರಿ ಶಂಕರ್ ಇಬ್ಬರೂ ತಮ್ಮ ಜನಮನ ಸಿನಿಮಾ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಕೆರೆಬೇಟೆ ಸಿನಿಮಾದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ಬ್ಯುಸಿಯಾಗಿದೆ.


    ಈ ನಡುವೆ ಸಿನಿಮಾತಂಡ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಬರುತ್ತಿದೆ. ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದೆ.


    ಸದ್ಯ ಟೈಟಲ್ ಪೋಸ್ಟರ್​​ ಮೂಲಕವೇ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಮುಂದಿನ ವರ್ಷಾರಂಭದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಅಲ್ಲಿವರೆಗೂ ಕಾಯಲೇ ಬೇಕು ಎಂದು ಚಿತ್ರತಂಡ ಮಾಹಿತಿ ನೀಡಿದೆ.


    ನಾಯಕ ಗೌರಿಶಂಕರ್ ಸಹೋದರ ಜೈಶಂಕರ್ ಪಟೇಲ್ ಹಾಗೂ ನಾಯಕ ಗೌರಿಶಂಕರ್ ಪಟೇಲ್ ಜನಮನ ಸಿನಿಮಾ ಬ್ಯಾನರ್‌ನಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರು ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಿಸಲಾಗಿದ್ದು, ಕೆರೆಬೇಟೆ ಮುಂದಿನ ವರ್ಷಾರಂಭದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts