ಬೆಂಗಳೂರು: ಬದುಕಿನ ಕತ್ತಲೆ ಕಳೆದು ಬೆಳಕಿನ ಭರವಸೆ ನೀಡುವ ದೀಪಗಳ ಹಬ್ಬ ದೀಪಾವಳಿಯನ್ನು ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಚಂದನವನದಲ್ಲೂ ದೀಪಾವಳಿ ಸಂಭ್ರಮ ಜೋರಾಗಿಯೇ ಇದೆ. ‘ಕೆಜಿಎಫ್’ ಮೂಲಕ ಸ್ಯಾಂಡಲ್ವುಡ್ ಅಂಗಳದಲ್ಲಿ ಖ್ಯಾತಿ ಗಳಿಸಿರುವ ನಟಿ ಅರ್ಚನಾ ಜೋಯಿಸ್ ದೀಪಾವಳಿ ಸಂಭ್ರಮದಲ್ಲಿದ್ದು, ಅದಕ್ಕೆಂದೇ ಹೊಸದೊಂದು ಫೋಟೋಶೂಟ್ ಮಾಡಿಸಿಕೊಂಡು ಎಲ್ಲರ ಗಮನ ಸೆಳೆಯುತ್ತಿದ್ದಾರೆ.
ದೀಪಾವಳಿ ಪ್ರಯುಕ್ತ ಬೆಳಕಿನ ಚಿತ್ತಾರದ ನಡುವೆ ಅರ್ಚನಾ ಜೋಯಿಸ್ ಫೋಟೋಶೂಟ್ ಮಾಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದು, ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾರಂಭಿಸಿದ್ದಾರೆ.
ದೀಪಾವಳಿ ಅಂದ್ರೆ ಬೆಳಕು, ಅದನ್ನೇ ಥೀಮ್ ಆಗಿಸಿಕೊಂಡು ಫೋಟೋಶೂಟ್ ಮಾಡಲಾಗಿದೆ ಎಂದು ತಿಳಿಸಿರುವ ಅರ್ಚನಾ ಜೋಯಿಸ್, ದೀಪಾವಳಿ ಸಂಭ್ರಮದ ಬಗ್ಗೆಯೂ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಪಟಾಕಿ ಹೊಡೆಯುವ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಆಚರಣೆ ಮಾಡುತ್ತಿದ್ದೇವೆ. ನನಗೆ ಈ ಬಾರಿ ದೀಪಾವಳಿ ತುಂಬಾ ಸ್ಪೆಷಲ್. ಯಾಕಂದರೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಪ್ರಚಾರ ಕೂಡ ಜೋರಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸೆಲೆಬ್ರೆಟಿ ಫೋಟೋಗ್ರಾಫರ್ ನಾಗರಾಜ್ ಸೋಮಯಾಜಿ ರೂಪಿಸಿದ್ದ ಕಾನ್ಸೆಪ್ಟ್ನಂತೆ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ಅರ್ಚನಾ ಜೋಯಿಸ್ ಅವರ ಚೆಂದದ ಈ ಫೋಟೋಗಳಿಗೆ ಯೋಗಿತ ಕಾಸ್ಟ್ಯೂಮ್ ಡಿಸೈನ್, ರೇಣುಕಾ ಹೇರ್ಸ್ಟೈಲ್ ಮತ್ತು ಮೇಕಪ್ ಮಾಡಿದ್ದಾರೆ.
ಕೆಜಿಎಫ್ ಸಿನಿಮಾ ನಂತರ ಸ್ಯಾಂಡಲ್ವುಡ್ನಲ್ಲಿ ಅರ್ಚನಾ ಜೋಯಿಸ್ ಬ್ಯುಸಿಯಾಗಿದ್ದು, ಇವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ಬಿಡುಗಡೆಯಾಗುತ್ತಿದೆ. ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಯ ಸನಿಹದಲ್ಲಿದೆ.
‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?