More

    ನಿರ್ಮಾಪಕ ಎಮ್​.ಎನ್.​ ಕುಮಾರ್ ವಿರುದ್ಧ ದೂರು ನೀಡಿದ ಕಿಚ್ಚ ಸುದೀಪ್

    ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ ಎಂ​.ಎನ್​.ಕುಮಾರ್ ವಿರುದ್ಧ ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ದೂರು ನೀಡಿದ್ದಾರೆ. “ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ” ಎಂದೆಲ್ಲಾ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ ನೀಡಲಾಗಿದೆ. ಹಾಗೆಯೇ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗಿದೆ.

    “ನೀವು ನನ್ನ ತಾಳ್ಮೆಯನ್ನು ಪರೀಕ್ಷಿಸಿದ್ದೀರಿ, ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನನ್ನದೇ ಆದ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಿ. ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ ದಂಡ ಕಟ್ಟಿಕೊಡಿ” ಎಂದು ದೂರು ದಾಖಲಿಸಿದ್ದಾರೆ ಸುದೀಪ್. ಕುಮಾರ್​​​​​ಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ನಿರ್ಮಾಪಕ ಎಂ.ಎನ್ ಸುರೇಶ್ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

    ಹಿರಿಯ ವಕೀಲ ಸಿವಿ ನಾಗೇಶ್ ಮುಖಾಂತರ ಶುಕ್ರವಾರ ಲೀಗಲ್ ನೊಟೀಸ್ ಜಾರಿ ಮಾಡಲಾಗಿದೆ.

    ಖಾರ ಪ್ರಿಯರೇ…ಟೊಮ್ಯಾಟೋ ಮಾತ್ರವಲ್ಲ, ಈಗ ಈ ತರಕಾರಿಯೂ ಬಲು ದುಬಾರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts