ಬೆಂಗಳೂರು: ಸ್ಯಾಂಡಲ್ವುಡ್ನ ನಟ ಕಿಚ್ಚ ಸುದೀಪ್ ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.
ಇದೊಂದು ಔಪಚಾರಿಕ ಭೇಟಿ ಎಂದು ಸಿಎಂ ಕಚೇರಿ ಹೇಳಿದರೂ, ಸುದೀಪ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ, ಸಿಎಂ ಮತ್ತು ಸುದೀಪ್ ನಡುವೆ ವಿವಿಧ ವಿಚಾರಗಳು ಚರ್ಚೆಯಾದವು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿರಿ ಸಿಡಿ ಕೇಸ್ಗೆ ಮತ್ತೊಂದು ಟ್ವಿಸ್ಟ್: ಹನಿ’ಟ್ರ್ಯಾಪ್’ ಸೀಕ್ರೇಟ್ ರಿವೀಲ್!
ಅಭಿನಯ ಚಕ್ರವರ್ತಿ ಕನ್ನಡ ಚಿತ್ರರಂಗದಲ್ಲಿ ಸುದೀಪ್ 25 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಳ್ಳಿ ಹಬ್ಬ ಕೂಡ ಆಚರಿಸಲಾಗಿದೆ. ಈ ಸಂಭ್ರಮದಲ್ಲಿ ಸಿಎಂ ಬಿಎಸ್ವೈ ಕೂಡ ಪಾಲ್ಗೊಂಡಿದ್ದರು. ಹೀಗಾಗಿ ಇಂದು ಬೆಳಗ್ಗೆ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಸುದೀಪ್, ಅಭಿನಂದನೆ ಸಲ್ಲಿಸಿದರು. ಸುದೀಪ್ಗೆ ನಿರ್ಮಾಪಕ ಜಾಕ್ ಮಂಜು ಸಾತ್ ನೀಡಿದರು. ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.
ಸಿಡಿ ಕೇಸ್: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?
ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
ಇದೇ ಗ್ಯಾಂಗ್ ಕೈಯಲ್ಲಿದೆ ಕಾಂಗ್ರೆಸ್ ನಾಯಕರ ಸಿಡಿ! ಲಕ್ಷ ಲಕ್ಷ ಕೊಟ್ಟು ಬಚಾವಾದ ಆ ನಾಯಕರು ಯಾರು ಗೊತ್ತಾ?