ಶಾಸಕ ಯಶ್ಪಾಲ್ ಸುವರ್ಣ ಆಶಯ
ಉಡುಪಿ ಜಿಲ್ಲಾ ಮಟ್ಟದ ಕಿಡ್ಸ್ ಮೀಟ್ ಉದ್ಘಾಟನೆ
ವಿಜಯವಾಣಿ ಸುದ್ದಿಜಾಲ ಉಡುಪಿ
ಕ್ರೀಡಾಕೂಟಗಳ ಆಯೋಜನೆಯಿಂದ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಅನುಕೂಲವಾಗುತ್ತದೆ. ಮಕ್ಕಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳಬೇಕು. ಉಡುಪಿ ಜಿಲ್ಲೆಯು ಶಿಕ್ಷಣ-ಆರೋಗ್ಯ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದ್ದು, ಕ್ರೀಡಾಕ್ಷೇತ್ರದಲ್ಲೂ ಸಾಧನೆ ಮಾಡುವಂತಾಗಲಿ ಎಂದು ಶಾಸಕ ಯಶ್ಪಾಲ್ ಸುವರ್ಣ ಆಶಯ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮೇ 17ರಂದು ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಕಿಡ್ಸ್ ಮೀಟ್- 2025 ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಅಸೋಸಿಯೇಷನ್ನ ಅಧ್ಯಕ್ಷ ಹರಿಪ್ರಸಾದ ರೈ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ರಘುಪತಿ ಭಟ್, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ನ ಗೌರವಾಧ್ಯಕ್ಷ ಡಾ.ಚಂದ್ರಶೇಖರ ಹೆಗ್ಡೆ ಇತರರು ಉಪಸ್ಥಿತರಿದ್ದರು.
ಅಸೋಸಿಯೇಷನ್ನ ಕಾರ್ಯದರ್ಶಿ ದಿನೇಶಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವರದರಾಜ ವಂದಿಸಿದರು. ಕ್ರೀಡಾಕೂಟದಲ್ಲಿ 8, 10, 12 ಹಾಗೂ 14 ವರ್ಷದೊಳಗಿನ ವಿಭಾಗದಲ್ಲಿ ಒಟ್ಟು 180 ಮಕ್ಕಳು ಭಾಗವಹಿಸಿದ್ದರು.