ಬೆಂಗಳೂರು: ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಸಂಗ್ರಹಿಸುವ ಬೂತ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಭಾನುವಾರ ಚಾಲನೆ ನೀಡಿದ್ದಾರೆ.
ಕಿದ್ವಾಯಿಗೆ ದಾಖಲಾಗುವ ಒಳರೋಗಿಗಳ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ರೋಗಿಗಳನ್ನು ಮಾತ್ರ ಮುಂದಿನ ಚಿಕಿತ್ಸೆಗೆ ಒಳಪಡಿಸ ಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ಡಾ. ಸಿ. ರಾಮಚಂದ್ರ ತಿಳಿಸಿದರು.
ಕಿದ್ವಾಯಿಯಲ್ಲಿ ಕರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸುವುದಕ್ಕೆ ಐಸಿಎಂಆರ್ನ ಡಾ. ಮಂಜುನಾಥ್ ಮೌಖಿಕ ಅನುಮತಿ ನೀಡಿದ್ದಾರೆ. ಈ ಪ್ರಯೋಗಾಲಯಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸಂಸ್ಥೆಗೆ ಸಲ್ಲಿಸಿದ್ದು, ಶೀಘ್ರ ದಲ್ಲೇ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ಇದಕ್ಕಾಗಿ ಬೆಕ್ವ್ಯಾನ್ ಕೌಲ್ಟರ್ ಬಯೋಮೆಕ್- 4000 ಮತ್ತು ಕ್ವಾಂಟ್ ಸ್ಟುಡಿಯೋ 5 ಉಪಕರಣಗಳನ್ನು ಬಳಸಲಾಗುತ್ತಿದೆ. ಮೂರೂವರೆ ತಾಸಿನ ಅವಧಿಯೊಳಗೆ 380 ಸ್ಯಾಂಪಲ್ಗಳ ಪರೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿವೆ. ಶೀಘ್ರದಲ್ಲೇ ಹೆಚ್ಚಿನ ಸಾಮರ್ಥ್ಯದ ಉಪಕರಣವನ್ನು ಅಳವಡಿಸಲಾಗುವುದು ಎಂದು ಹೇಳಿದರು. ಸಂಸದ ತೇಜಸ್ವಿ ಸೂರ್ಯ ಮತ್ತಿತರರಿದ್ದರು.