More

    ನಿಧಾನವಾಗಿ ವಾಹನ ಚಲಾಯಿಸು ಎಂದವನ ಮೇಲೆ ರಾಡ್‌ನಿಂದ ಹೊಡೆದು ಟಿಪ್ಪರ್ ಹರಿಸಿ ಕೊಲೆಗೈದ ಚಾಲಕ!

    ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನ ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್‌ನಿಂದ ಹೊಡೆದು, ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೋಟೆಬಾಗಿಲಿನ ನಿವಾಸಿ ಪಯಾಝ್(61) ಹತ್ಯೆಯಾದವರು. ಪಯಾಜ್ ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಜ್‌ಗೆ ತೆರಳುವ ಸಂದರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂಬಾತ ಅತಿ ವೇಗವಾಗಿ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದು, ಆಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಫಯಾಝ್ ಅವರ ಮೇಲೆ ಧೂಳನ್ನು ಹಾರಿದೆ. ಕೋಪಗೊಂಡ ಫಯಾಝ್ ಚಾಲಕನಿಗೆ ನಿಧಾನ ಹೋಗುವಂತೆ ಹೇಳಿದ್ದು, ಈ ಸಂದರ್ಭ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ನಮಾಜ್ ಮುಗಿಸಿ ಹಿಂತಿರುವ ಸಂದರ್ಭದಲ್ಲಿಯೂ ಅವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದ್ದು, ಈ ಸಂಧರ್ಭ ಫಯಾಝ್ ಟಿಪ್ಪರ್ ಹತ್ತಿ ಮಾತನಾಡಿದ್ದು, ಆಗ ಆರೀಸ್ ಮಾರಾಕಾಸ್ತ್ರದಿಂದ ಪಯಾಝ್ ಅವರ ತಲೆಗೆ ಹೊಡೆದು ಟಿಪ್ಪರನ್ನು ಸ್ಟಾರ್ಟ್ ಮಾಡಿ ಮುಂದಕ್ಕೆ ಚಲಾಯಿಸಿದ್ದಾನೆ. ಆಯತಪ್ಪಿ ರಸ್ತೆಗೆ ಬಿದ್ದ ಫಯಾಝ್ ಅವರ ಮೇಲೆಯೇ ಟಿಪ್ಪರನ್ನು ಹಾಯಿಸಿದ್ದಾನೆ.

    ರಾಡ್‌ನ ಏಟು ಮತ್ತು ಟಿಪ್ಪರ್ ಅಡಿಗೆ ಬಿದ್ದ ಫಯಾಝ್ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟರೆನ್ನಲಾಗಿದೆ. ಟಿಪ್ಪರ್ ಚಾಲಕ ಆರೀಸ್ ಟಿಪ್ಪರನ್ನು ಅರ್ಧ ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಆರೀಸ್ ವಾಹನ ಚಲಾಯಿಸುವ ಸಂದರ್ಭ ಗಾಂಜಾ ಸೇವನೆ ಮಾಡಿದ್ದಾನೆಂದು ಸಾರ್ವಜನಿಕರು ಶಂಕಿಸಿದ್ದಾರೆ. ಚಾಲಕನ ಪತ್ತೆಗಾಗಿ ಮೂಡುಬಿದಿರೆ ಪೊಲೀಸರು ಬಲೆ ಬೀಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts