More

    ಲಷ್ಕರ್ ಮೊಹಲ್ಲಾದಲ್ಲಿ ರೌಡಿಶೀಟರ್‌ಗಳ ಬರ್ಬರ ಹತ್ಯೆ

    ಶಿವಮೊಗ್ಗ: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೆ ಲಾಂಗು, ಮಚ್ಚುಗಳು ಹೊರಬಂದಿವೆ. ಬುಧವಾರ ಹಾಡಹಗಲೇ ನಗರದ ಲಷ್ಕರ್ ಮೊಹಲ್ಲಾ ಮೀನಿನ ಮಾರ್ಕೆಟ್ ಬಳಿ ರೌಡಿಶೀಟರ್‌ಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬ ರೌಡಿಶೀಟರ್ ಗಂಭೀರ ಗಾಯಗೊಂಡಿದ್ದಾನೆ.

    ಕೆ.ಆರ್.ಪುರಂ ನಿವಾಸಿ ಸುಹೇಲ್ ಅಲಿಯಾಸ್ ಖಲಂದರ್ (30) ಮತ್ತು ಅಣ್ಣಾನಗರದ ಶೋಯೆಬ್(35) ಕೊಲೆಯಾದವರು. ಬುಧವಾರ ಸಂಜೆ ಲಷ್ಕರ್ ಮೊಹಲ್ಲಾದ ಮೀನು ಮಾರ್ಕೆಟ್‌ಗೆ ಸ್ಕೂಟಿಯಲ್ಲಿ ತೆರಳಿದ್ದ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ರೌಡಿಶೀಟರ್ ಯಾಸೀನ್ ಕುರೇಶಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
    ಸಂಜೆ ಹೊತ್ತಿಗೆ ಲಷ್ಕರ್ ಮೊಹಲ್ಲಾಕ್ಕೆ ಸ್ಕೂಟಿಯಲ್ಲಿ ಬಂದ ಇಬ್ಬರು ಸ್ಥಳೀಯ ರೌಡಿಶೀಟರ್ ಯಾಸೀನ್ ಕುರೇಶಿ ಮೇಲೆ ಅಟ್ಯಾಕ್ ಮಾಡಿದೆ. ಈ ವೇಳೆ ಅಲ್ಲಿಯೇ ಇದ್ದ ಯಾಸಿನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿದೆ. ಏಕಾಏಕಿ ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.
    ಘಟನೆ ಸುದ್ದಿ ತಿಳಿಯುತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಎಎಸ್ಪಿ ಅನಿಲ್‌ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಬು ಅಂಜನಪ್ಪ, ಕೋಟೆ ಠಾಣೆ ಇನ್‌ಸ್ಪೆಕ್ಟರ್ ಸೇರಿ ಹಲವರು ಸ್ಥಳ ಪರಿಶೀಲಿಸಿದರು. ಈ ವೇಳೆ ಮಾರ್ಕೆಟ್‌ನಲ್ಲಿದ್ದ ಕೆಲ ಸಿಸಿ ಕ್ಯಾಮರಾ ತುಣುಕುಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

    ಬುಧವಾರ ಸಂಜೆ ಲಷ್ಕರ್ ಮೊಹಲ್ಲಾದ ಯುವಕನ ಮೇಲೆ ಕೊಲೆಯಾದ ಗೌಸ್ ಮತ್ತು ಸುಹೇಲ್ ಹಲ್ಲೆ ನಡೆಸಿದ್ದರು. ಈ ವೇಳೆ ಯುವಕನ ಸ್ನೇಹಿತರು ಗೌಸ್ ಮತ್ತು ಸುಹೇಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕಲ್ಲುಗಳನ್ನು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ. ಈ ಪೈಕಿ ಒಬ್ಬಾತ ಕೆ.ಆರ್.ಪುರಂ ನಿವಾಸಿ. ಮತ್ತೊಬ್ಬ ಅಣ್ಣಾನಗರದವನು. ಆರೋಪಿಗಳ ಗುರುತು ಪತ್ತೆಯಾಗಿದೆ. ಶೀಘ್ರವೇ ಬಂಧಿಸಲಾಗುವುದು.
    ಜಿ.ಕೆ.ಮಿಥುನ್‌ಕುಮಾರ್, ಎಸ್ಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts