ಬೆಂಗಳೂರು: ನಟ ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು’ ಚಿತ್ರದಿಂದ ಬಿಡುಗಡೆಗೊಂಡಿದೆ ಮತ್ತೊಂದು ಸುಮಧುರ ಹಾಡು.
ಪ್ರಸಿದ್ಧ್ ನಿರ್ದೇಶನದ ಈ ಚಿತ್ರಕ್ಕಾಗಿ ಡಾ||ವಿ. ನಾಗೇಂದ್ರ ಪ್ರಸಾದ್ ಬರೆದಿರುವ “ಹುಯ್ಯೋ ಹುಯ್ಯೋ ಮಳೆರಾಯ” ಎಂಬ ಹಾಡು ಇತ್ತೀಚಿಗೆ ರಿಲೀಸ್ ಆಗಿದ್ದು, ಈ ಹಾಡನ್ನು ಖ್ಯಾತ ಗಾಯಕ ರಘು ದೀಕ್ಷಿತ್ ಹಾಡಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಎಚ್ಡಿಕೆ ಕಣಕ್ಕೆ: ನಾಳೆ ನಗರದಲ್ಲಿ ಎರಡು ಪಕ್ಷದ ನಾಯಕರಿಂದ ಮಹತ್ವದ ಸಭೆ…!
ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಇದೀಗ ಮೆಚ್ಚುಗೆಗಳು ಹರಿದುಬರುತ್ತಿದೆ. ರಾಜ್ಯದಲ್ಲಿ ಬಿಸಿಲಿನ ಬೇಗೆ ವ್ಯಾಪಕವಾಗಿ ಹೆಚ್ಚಾಗಿದ್ದು, ನೀರಿನ ಬವಣೆ ಕೂಡ ಎದುರಾಗಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ತೊಂದರೆಯಿಂದ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ “ಭರ್ಜರಿ ಗಂಡು” ಇದೇ ಏಪ್ರಿಲ್ 5ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.
ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.
ಇದನ್ನೂ ಓದಿ: ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ಗೆ ಬರ್ತಾರಾ ಸರ್? ಡಿಕೆ ಶಿವಕುಮಾರ್ ರಿಯಾಕ್ಷನ್
ಚಿತ್ರದಲ್ಲಿ ಕಿರಣ್ ರಾಜ್ಗೆ ನಾಯಕಿಯಾಗಿ ಯಶಾ ಶಿವಕುಮಾರ್ ಮುಖ್ಯಭೂಮಿಕೆಯಲ್ಲಿದ್ದು, ರಮೇಶ್ ಭಟ್, ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರ ತಾರಾಗಣವಿದೆ.
ಬಾಳೆಹಣ್ಣಿನ ವಿಷಯದಲ್ಲಿ ಈ ತಪ್ಪನ್ನು ಮಾಡಲೇಬೇಡಿ! ಇಲ್ಲಿದೆ ಉಪಯುಕ್ತ ಮಾಹಿತಿ
ಅದೊಂದು ಪಾತ್ರ ನಾನು ಒಪ್ಪಬಾರದಿತ್ತು! ಆ ತಪ್ಪಿಂದ ನನ್ನ ಆಸೆಯೇ ನುಚ್ಚುನೂರಾಯ್ತು: ನಟಿ ಅರ್ಚನಾ