ಕಲಬುರಗಿ: ಕಾರು, ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್ಟಿಸಿ ಸಾರಿಗೆ ಸಂಸ್ಥೆಯ ನೌಕರ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹೊರವಲಯದಲ್ಲಿ ನಡೆದಿದೆ.
ಜೇವರ್ಗಿ ಪಟ್ಟಣದ ಹೊರವಲಯದ ಬಸ್ ಡಿಪೋ ಬಳಿ ಘಟನೆ ನಡೆದಿದ್ದು, ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಾರಿಗೆ ಚಾಲಕ ಲಾಲ್ಹುಸೇನ್ ಮನಿಯಾರ್ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದಾರೆ.
ಇದನ್ನೂ ಓದಿ: VIDEO| ಜೋರು ಮಳೆಯ ನಡುವೆಯೇ ಪ್ರಧಾನಿಯನ್ನು ಕಣ್ತುಂಬಿಕೊಂಡ ಜನತೆ; ಮೋದಿ ರೋಡ್ಶೋಗೆ ಸೈಕ್ಲಿಸ್ಟ್ಗಳ ಸಾಥ್
ಮಾರುತಿ ಸ್ವಿಫ್ಟ್ ಡಿಸೈರ್ ಕಾರು ವೇಗವಾಗಿ ಬರುತ್ತಿದ್ದ ಪರಿಣಾಮ ಮೊದಲಿಗೆ ಮುಂಬದಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಎದುರು ಬರುತ್ತಿದ್ದ ಕೆಕೆಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಹಗೂ ಬಸ್ನ ಮುಂಬದಿ ಜಖಂಗೊಂಡಿದೆ.
ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಜೇವರ್ಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿದ್ದಾರೆ.