More

    ಮಾಧುಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಕೆ.ಎಂ.ದೊಡ್ಡಿ: ನ್ಯಾಯ ಕೇಳಲು ಹೋದ ರೈತ ಮಹಿಳೆಯನ್ನು ನಿಂದಿಸಿರುವ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಮದ್ದೂರು-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

    ಬೇಡಿಕೆಗಳನ್ನು ಈಡೇರಿಸುವಂತೆ ಮಾತನಾಡಲು ಬಂದ ಮಹಿಳೆಯನ್ನು ಕೆಟ್ಟ ಪದಗಳಿಂದ ನಿಂದಿಸಿ ಅನಾಗರೀಕರಂತೆ ವರ್ತಿಸಿರುವ ಸಚಿವರು ಸಂಪುಟದಲ್ಲಿ ಕಾರ್ಯನಿರ್ವಹಿಸಲು ಅರ್ಹರಲ್ಲ. ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮಹಿಳೆಯ ಕ್ಷಮೆ ಯಾಚಿಸಬೇಕು. ಈ ಸಂಬಂಧ ಮಹಿಳಾ ಆಯೋಗ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಈ ಸಂದರ್ಭ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಣ್ಣೂರು ಮಹೇಂದ್ರ, ತಾಲೂಕು ಪ್ರಧಾನ ಕಾರ್ಯದರ್ಶಿ ಶೆಟ್ಟಹಳ್ಳಿ ರವಿಕುಮಾರ್, ಗುಡಿಗೆರೆ ಬಸವರಾಜು, ರಮೇಶ್, ಪುಟ್ಟಸ್ವಾಮಿ, ಶಿವಣ್ಣ, ಶಿವಲಿಂಗೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts