ಕೆ.ಎಂ.ದೊಡ್ಡಿ : ಸಾಮಾಜಿಕ ಕಳಕಳಿ ಇರಿಸಿಕೊಂಡು ಚಟುವಟಿಕೆಗಳನ್ನು ನಡೆಸಲು ನನಗೆ ಹಿರಿಯರು ಸಹಕಾರ ನೀಡಬೇಕು ಎಂದು ಭಾರತೀ ವಿದ್ಯಾ ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಜಿ. ಮಧು ಹೇಳಿದರು.
ಸಮೀಪದ ಚಂದೂಪುರ ಸರ್ಕಲ್ನ ಹಾಗಲಹಳ್ಳಿ ಬಸವರಾಜೇಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಗೌರವ ಸ್ವೀಕರಿಸಿ ಮಾತನಾಡಿದರು. ನನ್ನ ತಾತ ಜಿ.ಮಾದೇಗೌಡರು ಜೀವನ ಪೂರ್ಣ ನಡೆಸಿದ ಹೋರಾಟಗಳೆಲ್ಲವೂ ನನಗೆ ಹೆಮ್ಮೆಯಾಗಿದ್ದು ಚೈತನ್ಯ ತುಂಬಿವೆ. ಅವರ ವಂಶದಲ್ಲಿ ಹುಟ್ಟಿದ್ದೇ ನನ್ನ ಪುಣ್ಯ ಎಂದರು. ಮೂರು ತಲೆಮಾರಿನ ಪೀಳಿಗೆಯವರನ್ನು ಒಟ್ಟಿಗೆ ಕರೆದೊಯ್ಯಲು ಪ್ರಾಮಾಣಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ನಮ್ಮ ಕುಟುಂಬದ ಹಿರಿಯರು ಕಟ್ಟಿದ ಹಲವು ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸಮಾಜದ ಹಿತಕ್ಕಾಗಿ ಸೇವೆ ಮಾಡುತ್ತಿವೆ. ಹಿರಿಯರ ಹಾದಿಯಲ್ಲೇ ನಾನು ಸಾಗುತ್ತೇನೆ ಎಂದು ಹೇಳಿದರು.ಕಾವೇರಿ ನೀರಾವರಿ ನಿಗಮದ ನಿವೃತ್ತ ಇಂಜಿನಿಯರ್ ಹಾಗಲಹಳ್ಳಿ ಬಸವರಾಜೇಗೌಡ ಮಾತನಾಡಿ, ಹಿರಿಯ ಮುತ್ಸದ್ದಿ ಜಿ.ಮಾದೇಗೌಡರು ಮಂಡ್ಯ ಜಿಲ್ಲೆಗೆ ನೀಡಿದ ಕೊಡುಗೆ ಅಪಾರ ಎಂದರು. ಎಸ್.ಐ. ಹೊನ್ನಲಗೆರೆ(ಚಂದೂಪುರ)ಶಿವಕ್ಷೇತ್ರ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಆರ್ಶೀವಚನ ನೀಡಿದರು.
ಮುಖಂಡರಾದ ಅಣ್ಣೇಸ್ವಾಮಿ, ಎಲ್ಐಸಿ ಕೆಂಪೇಗೌಡ, ಪುಟ್ಟಮಾದೇಗೌಡ, ಚಂದೂಪುರ ಪುನೀತ್, ಹಾಗಲ ಹಳ್ಳಿ ಪ್ರಭ, ಹೊಸೂರು ಅನಿಲ್, ಮುಡೀನಹಳ್ಳಿ ಅಪ್ಪಾಜಿ, ಪವನ್ಕುಮಾರ್, ರಮೇಶ್ ಇತರರು ಇದ್ದರು.
ಸಾಮಾಜಿಕ ಕಳಕಳಿ ಸೇವೆಗೆ ಸಹಕರಿಸಿ

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್ ಬಾಯ್ ಹೇಳಿ | Ginger
Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…
ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್ ಆಹಾರ ಸೇವಿಸಿದ್ರೆ ಸಾಕು| Weight Gain
Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…
ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake
Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…