ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆಊಟದ ತಟ್ಟೆಯಿಂದ ತಯಾರಿಸಿದ್ದ ಚಾಕು ಮುಂತಾದ ಮಾರಕಾಸ್ತ್ರಗಳು ಈ ವೇಳೆ ಪತ್ತೆಯಾಗಿವೆ.
ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್ಗೆ ಹೋದ ಉದ್ಯಮಿ!
ಮತದಾನಕ್ಕೆ ಒಂದು ದಿನ ಬಾಕಿ ಇದ್ದು, ಈ ವೇಳೆ ಜೈಲಿನಿಂದ ಕರೆ ಮಾಡಿ ಬೆದರಿಕೆ ಹಾಕುವುದು, ಇಂಥವರಿಗೆ ಮತ ಹಾಕಿ ಎಂದು ಒತ್ತಡ ಹಾಕುವ ಶಂಕೆ ಹಿನ್ನೆಲೆಯಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ನೇತೃತ್ವದಲ್ಲಿ ಇಬ್ಬರು ಡಿಸಿಪಿ ಹಾಗೂ ಸಿಸಿಬಿ ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ವರ್ಷ ನೂರು ದಾಟಿದ್ರೂ ಕುಂದಿಲ್ಲ ಉತ್ಸಾಹ; ಮತ ಚಲಾಯಿಸುವಂತೆ ಶತಾಯುಷಿ ಅಜ್ಜಿಯರ ಕರೆ
ದಾಳಿ ವೇಳೆ ಮೊಬೈಲ್ ಫೋನ್ಗಳು, ಅಲ್ಪ ಪ್ರಮಾಣದ ಡ್ರಗ್ಸ್ ಹಾಗೂ ಊಟದ ಪ್ಲೇಟ್ನಿಂದ ತಯಾರಿಸಿದ ಚಾಕುಗಳು ಪತ್ತೆಯಾಗಿದೆ. ಪ್ರಮುಖವಾಗಿ ರೌಡಿಶೀಟರ್ಗಳು, ಕೊಲೆ ಆರೋಪಿಗಳು, ಇತರ ಅಪರಾಧ ಹಿನ್ನಲೆಯುಳ್ಳವರನ್ನು ವಿಚಾರಣೆ ಮಾಡಲಾಗಿದ್ದು, ವಿಚಾರಣಾಧೀನ ಕೈದಿಗಳು, ಶಿಕ್ಷೆಗೆ ಒಳಗಾಗಿರುವ ಕೈದಿಗಳ ಬ್ಯಾರಕ್ನಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಜೈಲಿನಲ್ಲಿದ್ದುಕೊಂಡೇ ಚುನಾವಣಾ ಅಖಾಡದಲ್ಲಿ ಕಾರ್ಯಾಚರಣೆ ನಡೆಸಿದ್ದ ಹಲವು ಆರೋಪಿಗಳು ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?