ಕೊಡಗು: ಸಂಸ್ಕೃತಿ ರಕ್ಷಣೆಯ ಸಲುವಾಗಿ ಕೊಡವರು ನಡೆಸುತ್ತಿರುವ ಬೃಹತ್ ಪಾದಯಾತ್ರೆ ಶುರುವಾಗಿ ಇಂದು (ಫೆಬ್ರವರಿ 06) ಐದನೇ ದಿನಕ್ಕೆ ಕಾಲಿರಿಸಿದ್ದು, ಜನರು ಪಾದಯಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ. ಫೆಬ್ರವರಿ 07ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯ ಸಮುದಾಯ ಬಾಂಧವರು ಸಾಂಪ್ರದಾಯಿಕ ಉಡುಪಿನೊಂದಿಗೆ ಅತ್ಯಂತ ಶಿಸ್ತುಬದ್ಧವಾಗಿ ಜಾಥದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. ಪಾದಯಾತ್ರೆಯ ಮೂಲಕ ಕೊಡವ ಸಮುದಾಯ ಬಾಂಧವರು ತಮ್ಮ ಜನಾಂಗದ ಅಸ್ತಿತ್ವ ಮತ್ತು ಭದ್ರತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.
ಫೆಬ್ರವರಿ 7 ರಂದು ಬೆಳಿಗ್ಗೆ 8:30 ಕ್ಕೆ ಮಡಿಕೇರಿ ಪಟ್ಟಣಕ್ಕೆ ಅಂತಿಮ ಹಂತವನ್ನು ಪ್ರವೇಶಿಸಲಿರುವ “ಕೊಡವಾಮೆ ಬಾಲೋ” ಎಂಬ ಐತಿಹಾಸಿಕ ಶಾಂತಿ ಪ್ರತಿಭಟನಾ ಮೆರವಣಿಗೆಗೆ ನಾವು ನಿಮ್ಮನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತೇವೆ. ಇದು ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಸಾಂಸ್ಕೃತಿಕ ಪ್ರದರ್ಶನಗಳು, ಸಾಂಪ್ರದಾಯಿಕ ನೃತ್ಯಗಳು ಇತ್ಯಾದಿಗಳೊಂದಿಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಮಾನ ಸಾಂವಿಧಾನಿಕ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ಮತ್ತು ಕೊಡವರು ಮತ್ತು ಕೊಡವ ಮಾತನಾಡುವ ಸಮುದಾಯಗಳ ದೀರ್ಘಕಾಲದಿಂದ ಬಾಕಿ ಇರುವ ವಿವಿಧ ಬೇಡಿಕೆಗಳನ್ನು ಎತ್ತಿ ತೋರಿಸುತ್ತದೆ. ಈ ಉದಾತ್ತ ಉದ್ದೇಶಕ್ಕಾಗಿ ಯಾವಾಗಲೂ ನಿಮ್ಮ ನಿರಂತರ ಬೆಂಬಲವನ್ನು ನಾವು ನಿರೀಕ್ಷಿಸುತ್ತೇವೆಎಂದು ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿಗಳು ಕೊಡವ ಭಾಂದವರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದಾರೆ.
Team India ಆಲ್ರೌಂಡ್ ಪ್ರದರ್ಶನಕ್ಕೆ ನಲುಗಿದ ಆಂಗ್ಲರು; ಮೊದಲ ಏಕದಿನದಲ್ಲಿ ಭಾರತಕ್ಕೆ ಸುಲಬ ತುತ್ತಾದ ಇಂಗ್ಲೆಂಡ್
ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ ಅದನ್ನು ತಂದಿದ್ದೆ ಕಾಂಗ್ರೆಸ್: Santosh Lad